Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಧಾರ್ಮಿಕ

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

By ANU News
July 3, 2026 1 Min Read
0

ನವದೆಹಲಿ: ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರಿಕರಿಗೆ ಶುಭಾಶಯ ಕೋರಿದ್ದು, ಸುರಕ್ಷಿತ ಹಾಗೂ ಆಧ್ಯಾತ್ಮಿಕ ಅನುಭವಕ್ಕಾಗಿ ಐದು ಪ್ರಮುಖ ಸಂಕಲ್ಪಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಅಮರನಾಥ ಯಾತ್ರೆ ಭಾರತದ ಆಧ್ಯಾತ್ಮಿಕ ಪರಂಪರೆ ಮತ್ತು ಸಾಂಸ್ಕೃತಿಕ ಏಕತೆಯ ಪ್ರತೀಕ ಎಂದು ಬಣ್ಣಿಸಿದ್ದಾರೆ. ಬಾಬಾ ಬರ್ಫಾನಿ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು “ವೈವಿಧ್ಯತೆಯಲ್ಲಿ ಏಕತೆ”ಯ ಸಂದೇಶವನ್ನು ಸಾರುತ್ತಾರೆ ಎಂದು ತಿಳಿಸಿದ್ದಾರೆ.

ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಶ್ರೀ ಅಮರನಾಥಜಿ ದೇವಾಲಯ ಮಂಡಳಿ, ಜಮ್ಮು-ಕಾಶ್ಮೀರ ಆಡಳಿತ, ಭಾರತೀಯ ಸೇನೆ, ಸಿಆರ್‌ಪಿಎಫ್, ಜಮ್ಮು-ಕಾಶ್ಮೀರ ಪೊಲೀಸ್, ಐಟಿಬಿಪಿ, ಬಿಎಸ್‌ಎಫ್, ಎನ್‌ಡಿಆರ್‌ಎಫ್, ವೈದ್ಯರು, ನೈರ್ಮಲ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸೇವೆಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ.

ಯಾತ್ರಿಕರು ಐದು ಸಂಕಲ್ಪಗಳನ್ನು ಪಾಲಿಸುವಂತೆ ಪ್ರಧಾನಿ ಮನವಿ ಮಾಡಿದ್ದಾರೆ. ಯಾತ್ರೆ ವೇಳೆ ಸ್ವಚ್ಛತೆ ಕಾಪಾಡುವುದು, ಸುರಕ್ಷತೆ ಹಾಗೂ ಆಡಳಿತದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಿ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ನೀಡುವುದು, ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡ ನೆಡುವುದು ಹಾಗೂ ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಕರ್ತವ್ಯ ನಿರ್ವಹಿಸುವಂತೆ ಕರೆ ನೀಡಿದ್ದಾರೆ.

ಈ ಬಾರಿಯ ಯಾತ್ರೆಯೂ ದೇಶದ ಸಾಂಸ್ಕೃತಿಕ ಏಕತೆ ಮತ್ತು ಸೇವಾ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಪ್ರಧಾನಿ ಹಾರೈಸಿದ್ದು, ಬಾಬಾ ಬರ್ಫಾನಿಯ ಆಶೀರ್ವಾದ ಎಲ್ಲ ಭಕ್ತರ ಮೇಲಿರಲಿ ಎಂದು ಪ್ರಾರ್ಥಿಸಿದ್ದಾರೆ.

Author

ANU News

Follow Me
Other Articles
Previous

Amarnath Yatra Begins; PM Modi Urges Pilgrims to Follow Five Resolutions

Next

India to Tour Sri Lanka in August; Two-Test Series Schedule Announced

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme