Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

By ANU News
July 5, 2026 1 Min Read
0

ಅಮರಾವತಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಉಂಗುತೂರ್ ಮಂಡಲದ ಚೆಬ್ರೋಲ್ ಸಮೀಪ ಶನಿವಾರ ತಡರಾತ್ರಿ ಚೆರ್ಲಪಲ್ಲಿ–ಶಾಲಿಮಾರ್ ವಿಶೇಷ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಮೃತದೇಹಗಳು ಗುರುತಿಸಲಾಗದಷ್ಟು ನಜ್ಜುಗುಜ್ಜಾಗಿದ್ದು, ತಾಡೇಪಲ್ಲಿಗುಡೆಮ್ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಮೃತಪಟ್ಟವರು ಒಂದೇ ಕುಟುಂಬದವರಾಗಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳದಲ್ಲಿ ದೊರೆತ ಎಟಿಎಂ ಕಾರ್ಡ್, ಬೈಕ್ ಪಾರ್ಕಿಂಗ್ ರಶೀದಿ ಹಾಗೂ ಮೊಬೈಲ್ ಫೋನ್‌ಗಳ ಆಧಾರದ ಮೇಲೆ ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಆತ್ಮಹತ್ಯೆ ಶಂಕೆಯೂ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಇದೇ ವೇಳೆ, ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪೆದ್ದಕಪರ್ತಿ ಗ್ರಾಮದ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಹೈದರಾಬಾದ್–ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಆಂಧ್ರಪ್ರದೇಶದ ಕಾಕಿನಾಡ ಮೂಲದವರಾಗಿದ್ದು, ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ.

Author

ANU News

Follow Me
Other Articles
Previous

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

Next

Eight Killed in Separate Accidents in Andhra Pradesh and Telangana

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Cars will fly’: Almora innovator Ravi Tamta tests flying car prototype
    • ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !
    • ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
    • ‘ನಶಾ ಮುಕ್ತ ಭಾರತ’ ಸಂದೇಶದೊಂದಿಗೆ ಗಮನಸೆಳೆದ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’
    • Say yes to fitness, no to drugs: Mandaviya leads nationwide cycling drive
    Copyright 2026 — ANU News. All rights reserved. Blogsy WordPress Theme