Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

By ANU News
May 24, 2026 1 Min Read
0

ಬೆಂಗಳೂರು: ಕಲಬುರ್ಗಿಯಲ್ಲಿ ಕೋಮುಗಲಭೆ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್‌ ಸರ್ಕಾರ ಮತ್ತೆ ಮತಬ್ಯಾಂಕ್‌ ರಾಜಕಾರಣ ಮಾಡಿದೆ. ಇದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿರುವವರ, ಸಚಿವರ ಕಾರಿನ ಮೇಲೆ ದಾಳಿ ಮಾಡಿರುವವರ, ದರ್ಗಾ ಹೆಸರಲ್ಲಿ ಕೋಮುಗಲಭೆ ಮಾಡಿರುವವರ ವಿರುದ್ಧ ಇದ್ದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆದಿದೆ. ಈ ಪ್ರಕರಣದಲ್ಲಿ ಪಾಪ್ಯುಲರ್‌ ಫ್ರಂಟ್‌ ಸೇರಿದಂತೆ ಸುಮಾರು 150 ಮಂದಿಯ ಮೇಲಿದ್ದ ಕೇಸುಗಳನ್ನು ತೆಗೆದುಹಾಕಿ ವೋಟ್‌ ಬ್ಯಾಂಕ್‌ ರಾಜಕೀಯ ಮಾಡಲಾಗಿದೆ. ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರು ಹಾಗೂ ಮುಖ್ಯಮಂತ್ರಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಮತ ನೀಡಿದರೆ ಸಾಕು, ಭಯೋತ್ಪಾದನೆ ಮಾಡಿದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ಕಾಂಗ್ರೆಸ್‌ ನೀಡಿದೆ. ಇಂತಹ ಕ್ರಮಗಳಿಂದಾಗಿ ದೇಶದ ಭದ್ರತೆಗೆ ಅಪಾಯ ಬರುತ್ತದೆ ಎಂದರು.

ಬಾಂಗ್ಲಾ ಪ್ರಜೆಗಳು ದೇಶದೊಳಗೆ ನುಗ್ಗಿ ದೇಶದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೆಲವರು ಕೋಮುಗಲಭೆ ಮಾಡುತ್ತಿದ್ದಾರೆ. ಈ ಕ್ರಮದಿಂದ ಹಿಂದೆ ಸರಿಯದೇ ಇದ್ದರೆ ಬಿಜೆಪಿ ಹೋರಾಟ ಮಾಡಲಿದೆ. ಇತ್ತೀಚೆಗೆ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲಾಗಿದೆ ಹಾಗೂ ಮುಸ್ಲಿಮ್‌ ಸಮುದಾಯಕ್ಕೆ ಸುಮಾರು 600 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಮೂಲಕ ಕೇವಲ ಮತಕ್ಕಾಗಿ ಮುಸ್ಲಿಮರಿಗೆ ಬಂಪರ್‌ ಬಹುಮಾನಗಳನ್ನು ನೀಡಿ ಓಲೈಕೆ ಮಾಡಲಾಗಿದೆ. ರೈತರು, ಕನ್ನಡಪರ ಹೋರಾಟಗಾರರ ಪ್ರಕರಣಗಳನ್ನು ಹಿಂಪಡೆದಿರುವುದು ಸರಿ ಇದೆ. ಆದರೆ ಕೋಮುಗಲಭೆ ಮಾಡಿರುವವರು ಯಾರ ಪರವಾಗಿ ಹೋರಾಟ ಮಾಡಿದ್ದಾರೆ? ಇದು ಬಹುಸಂಖ್ಯಾತರಿಗೆ ದ್ರೋಹ ಬಗೆದ ಕ್ರಮ ಎಂದರು.

Author

ANU News

Follow Me
Other Articles
Previous

AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

Next

ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!
    • Yash, Rishab Shetty, Rakshit Shetty among Sandalwood stars set to add glamour to Mysuru Dasara
    • Karnataka to move SC over Centre withholding ₹2,186 crore in panchayat grants
    • ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
    • ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!
    Copyright 2026 — ANU News. All rights reserved. Blogsy WordPress Theme