Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

By ANU News
July 2, 2026 1 Min Read
0

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು ವಿರೋಧ ಪಕ್ಷವಾದ ಜೆಡಿಎಸ್ ತೀವ್ರವಾಗಿ ಟೀಕಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಉಚಿತ ವಿದ್ಯುತ್ ಯೋಜನೆಗೆ ಜಾತಿ ಪ್ರಮಾಣ ಪತ್ರ ಹಾಗೂ ಪ್ಯಾನ್ ಕಾರ್ಡ್ ಕೇಳುವುದರ ಹಿಂದಿನ ಉದ್ದೇಶವೇನು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

“ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಮನೆ-ಮನೆ ಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ” ಎಂದು ಜೆಡಿಎಸ್ ಆರೋಪಿಸಿದೆ.

ಇದಲ್ಲದೆ, “ಉಚಿತ ವಿದ್ಯುತ್ ಪಡೆಯಲು ಪ್ಯಾನ್ ಕಾರ್ಡ್ ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂಬುದನ್ನು ದೃಢೀಕರಿಸಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಸಾಕಾಗುವುದಿಲ್ಲವೇ?” ಎಂದು ಮುಖ್ಯಮಂತ್ರಿ ಅವರನ್ನು ಉದ್ದೇಶಿಸಿ ಪ್ರಶ್ನಿಸಿದೆ.

ಯೋಜನೆಗೆ ಹೊಸ ಷರತ್ತುಗಳನ್ನು ವಿಧಿಸುವ ಮೂಲಕ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್, ಬಡವರು, ರೈತರು ಹಾಗೂ ಮಧ್ಯಮ ವರ್ಗದ ಕುಟುಂಬಗಳನ್ನು ಅನಗತ್ಯ ದಾಖಲೆಗಳ ಹೆಸರಿನಲ್ಲಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದೆ.

“ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ” ಎಂದು ಭಾಷಣ ಬಿಗಿದು, ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ @INCKarnataka ಸರ್ಕಾರ, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಈಗ ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ!

ಮನೆ-ಮನೆ ಪರಿಶೀಲನೆ ನೆಪದಲ್ಲಿ ಎಸ್ಕಾಂ… pic.twitter.com/OPegtjqEyq

— Janata Dal Secular (@JanataDal_S) July 1, 2026

Author

ANU News

Follow Me
Other Articles
Previous

No BJP leaders in Ayodhya trust, Congress making false allegations: CT Ravi

Next

‘What does caste certificate have to do with free electricity?’: JD(S) targets Karnataka govt over Gruha Jyothi verification

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು
    • Garbage dump collapse in Guinea kills 30; several feared trapped
    • ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ
    • Chamarajanagar shootout case handed over to CID; four FIRs under probe
    • Indian Railways launches special drive to clean, disinfect drinking-water tanks and filters
    Copyright 2026 — ANU News. All rights reserved. Blogsy WordPress Theme