Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

By Anu News
June 8, 2026 1 Min Read
0

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಮಾದರಿಯಲ್ಲೇ ಜಾತಿ ಸಮೀಕರಣಕ್ಕೆ ಆದ್ಯತೆ ನೀಡಿರುವುದು ಗಮನ ಸೆಳೆದಿದೆ. ಪಕ್ಷವು ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಮೇಲ್ಮನೆ ಅಭ್ಯರ್ಥಿಗಳಾಗಿ ಘೋಷಿಸಿದೆ.

ಪಕ್ಷದ ಹಿರಿಯ ಮುಖಂಡರಾದ ಲಿಂಗರಾಜ್ ಪಾಟೀಲ್ ಈ ಹಿಂದೆ ಬಿಜೆಪಿ ಶಿಸ್ತು ಸಮಿತಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಕ್ಷದೊಳಗಿನ ಶಿಸ್ತು ಮತ್ತು ಸಂಘಟನೆ ಬಲಪಡಿಸುವಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.

ಇನ್ನೊಬ್ಬ ಅಭ್ಯರ್ಥಿ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದು, ಹಿಂದುಳಿದ ವರ್ಗಗಳ ನಡುವೆ ಪಕ್ಷದ ನೆಲೆಯನ್ನು ವಿಸ್ತರಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಬಿಸಿ ಸಮುದಾಯವನ್ನು ಬಿಜೆಪಿ ಪರವಾಗಿ ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆಯ ಮೂಲಕ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಮತಬ್ಯಾಂಕ್‌ ಅನ್ನು ಮತ್ತಷ್ಟು ಬಲಪಡಿಸುವ ರಾಜಕೀಯ ಸಂದೇಶವನ್ನು ಬಿಜೆಪಿ ನೀಡಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.

Author

Anu News

Follow Me
Other Articles
Previous

ಜೆಡಿಎಸ್ ನಿರೀಕ್ಷೆಗೆ ತಣ್ಣೀರೆರಚಿದ ಬಿಜೆಪಿ: ರಾಜ್ಯಸಭೆಗೆ ಹೊಸ ಮುಖ

Next

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ
    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    Copyright 2026 — ANU News. All rights reserved. Blogsy WordPress Theme