Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

By ANU News
August 1, 2026 1 Min Read
0

ನವದೆಹಲಿ: ನೀಟ್ (NEET) ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ–2026’ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಕಾಯ್ದೆ ದೇಶಾದ್ಯಂತ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಹೊಸ ಕಾನೂನಿನ ಪ್ರಕಾರ, ಕೇಂದ್ರ ಸಾರ್ವಜನಿಕ ಸೇವಾ ಆಯೋಗ (UPSC), ಸಿಬ್ಬಂದಿ ಆಯ್ಕೆ ಆಯೋಗ (SSC), ರೈಲ್ವೆ ನೇಮಕಾತಿ ಮಂಡಳಿ (RRB), ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ನೀಟ್ (NEET), ಸಿಯುಇಟಿ (CUET) ಸೇರಿದಂತೆ ಕೇಂದ್ರ ಸಚಿವಾಲಯಗಳು ಹಾಗೂ ಇಲಾಖೆಗಳು ನಡೆಸುವ ಎಲ್ಲ ಸಾರ್ವಜನಿಕ ಸ್ಪರ್ಧಾತ್ಮಕ ಪರೀಕ್ಷೆಗಳು ಇದರ ವ್ಯಾಪ್ತಿಗೆ ಬರಲಿವೆ.

ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಜಾಲಗಳು, ಪ್ರಶ್ನೆಪತ್ರಿಕೆ ಸೋರಿಕೆ, ಸೈಬರ್ ದಾಳಿ, ತಾಂತ್ರಿಕ ದುರ್ಬಳಕೆ, ಕೋಚಿಂಗ್ ಕೇಂದ್ರಗಳು ಹಾಗೂ ಸೇವಾ ಪೂರೈಕೆದಾರರ ವಿರುದ್ಧ ಕಠಿಣ ಜೈಲು ಶಿಕ್ಷೆ ಮತ್ತು ಕೋಟ್ಯಂತರ ರೂಪಾಯಿ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ಪತ್ತೆಹಚ್ಚಲು ಹಾಗೂ ತನಿಖೆ ನಡೆಸಲು ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವೂ ನೀಡಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳು ಮತ್ತು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಲಕ್ಷಾಂತರ ಅಭ್ಯರ್ಥಿಗಳು ಸಂಕಷ್ಟ ಅನುಭವಿಸಿದ್ದರು. ಹೊಸ ಕಾಯ್ದೆ ಜಾರಿಗೆ ಬಂದಿರುವುದರಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ಪ್ರಾಮಾಣಿಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಲ್ಲಿ ವಿಶ್ವಾಸ ಮೂಡಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Author

ANU News

Follow Me
Other Articles
Previous

CWG 2026: ಮಹಿಳೆಯರ 48 ಕೆಜಿ ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ

Next

Public Examinations Amendment Act notified after Presidential assent

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Cauvery row: BJP’s Vijayendra urges Stalin to respect Karnataka’s water rights
    • “ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ
    • Heavy rains lash Karnataka; Kabini discharge increased as reservoir inflows rise
    • ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ
    • Veerkesari Belthangady marks 10 years with 210 successful service projects
    Copyright 2026 — ANU News. All rights reserved. Blogsy WordPress Theme