Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

By ANU News
July 16, 2026 1 Min Read
0

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚಿನ ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, “ಕೈದಿಗಳ ಪರಾರಿ ಪ್ರಕರಣವನ್ನು ‘ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ’ ಸಂಭ್ರಮಿಸುತ್ತಾ ನನ್ನನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ಆಡಳಿತದ ವೈಫಲ್ಯವನ್ನು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಹೇಳಿದ್ದಾರೆ.

2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಒಂದೇ ಬಾರಿ ಎಂಟು ಕೈದಿಗಳು ಪರಾರಿಯಾಗಿದ್ದರು. ಪರಾರಿಯಾದವರಲ್ಲಿ ಇಬ್ಬರನ್ನು 14 ವರ್ಷಗಳ ಬಳಿಕವೇ ಬಂಧಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ 2010ರಲ್ಲಿ 26, 2011ರಲ್ಲಿ 18, 2012ರಲ್ಲಿ 17, 2020ರಲ್ಲಿ 11, 2021ರಲ್ಲಿ 4 ಹಾಗೂ 2022ರಲ್ಲಿ 10 ಕೈದಿಗಳು ಪರಾರಿಯಾಗಿದ್ದರು ಎಂದು ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ ಖರ್ಗೆ, “ಇದನ್ನು ಬಿಜೆಪಿ ತನ್ನ ಆಡಳಿತದ ವೈಫಲ್ಯ ಎಂದು ಒಪ್ಪಿಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ತಿರುಗೇಟು ನೀಡಿರುವ ಅವರು, “ನಿಮ್ಮ ತಂದೆಯವರ ಆಡಳಿತದ ವೈಫಲ್ಯಗಳಿಗೆ ಅವರನ್ನು ಹೊಣೆ ಮಾಡುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ, “ನಾನು ನನ್ನ ಇಲಾಖೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದೇನೆ. ಪಂಚಾಯತ್ ರಾಜ್ ವಿಕೇಂದ್ರೀಕರಣದಲ್ಲಿ ಕರ್ನಾಟಕವನ್ನು ನಂ.1 ಎಂದು ಕೇಂದ್ರ ಸರ್ಕಾರವೇ ಘೋಷಿಸಿದೆ” ಎಂದು ಖರ್ಗೆ ಹೇಳಿದ್ದಾರೆ.

Author

ANU News

Follow Me
Other Articles
Previous

K’taka jailbreak: ‘Don’t cover up failure with excuses,’ Vijayendra hits out at Priyank Kharge

Next

‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
    • Gowri-Ganesha festival: KSRTC to operate 2,400 extra buses from Bengaluru
    • Mekedatu project: Karnataka steps up land process, officials told to fast-track work
    • ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ
    • Karnataka steps up crackdown on PoP Ganesh idols; 872 seized across 9 districts
    Copyright 2026 — ANU News. All rights reserved. Blogsy WordPress Theme