Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

By Anu News
June 14, 2026 1 Min Read
0

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಎಂದು ಬಿಂಬಿಸಲಾಗಿರುವ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ಖಂಡಿಸಿರುವ ರೈತರು, ಭೂಮಿ ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರದ ಎಪಿಎಂಸಿ ಆವರಣದಲ್ಲಿರುವ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೆ ಬೈಕ್ ರ್ಯಾಲಿ ಹಾಗೂ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಹಾಗೂ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Author

Anu News

Follow Me
Other Articles
Previous

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

Next

ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme