Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಭಾಗವತ್ ಹೇಳಿಕೆ, RSS ಧೋರಣೆ ಕುರಿತು ಹರಿಪ್ರಸಾದ್ ಪ್ರಶ್ನೆ; ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ

By ANU News
September 1, 2026 1 Min Read
0

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ಕಚೇರಿ ಎದುರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಹರಿಪ್ರಸಾದ್, ನ್ಯೂಯಾರ್ಕ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆ ಹಾಗೂ ದೇಶದಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಅನುಸರಿಸುತ್ತಿರುವ ರಾಜಕೀಯ ಧೋರಣೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ನಡೆದ ಸರ್ವಧರ್ಮ ಸಂವಾದದಲ್ಲಿ, “ಮುಸ್ಲಿಮರಿಲ್ಲದ ಭಾರತವನ್ನು ಬಯಸುವವನು ನಿಜವಾದ ಹಿಂದೂ ಆಗಿರಲು ಸಾಧ್ಯವಿಲ್ಲ” ಎಂಬ ಅರ್ಥದ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ ಭಾರತದಲ್ಲಿ ಅಲ್ಪಸಂಖ್ಯಾತರ ಕುರಿತು ರೂಪಿಸಲಾಗುತ್ತಿರುವ ರಾಜಕೀಯ ವಾತಾವರಣಕ್ಕೂ, ವಿದೇಶದಲ್ಲಿ ಪ್ರತಿಪಾದಿಸಲಾಗುತ್ತಿರುವ ಭಾವೈಕ್ಯತೆಯ ಸಂದೇಶಕ್ಕೂ ಇಷ್ಟೊಂದು ವ್ಯತ್ಯಾಸ ಏಕೆ ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಕಾನೂನಿನ ಮುಂದೆ ಸಮಾನ ರಕ್ಷಣೆಯನ್ನು ಖಾತರಿಪಡಿಸಿದೆ. ಹೀಗಾಗಿ ಮುಸ್ಲಿಮರು, ಕ್ರೈಸ್ತರು ಸೇರಿದಂತೆ ಯಾವುದೇ ಧರ್ಮದವರನ್ನು ಎರಡನೇ ದರ್ಜೆಯ ನಾಗರಿಕರಂತೆ ಕಾಣುವ ರಾಜಕೀಯ ಅಥವಾ ಸಾಮಾಜಿಕ ದೃಷ್ಟಿಕೋನ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಅಲ್ಪಸಂಖ್ಯಾತರನ್ನು ರಾಜಕೀಯ ಧ್ರುವೀಕರಣದ ಕೇಂದ್ರಬಿಂದುವನ್ನಾಗಿ ಮಾಡುವ ವಾತಾವರಣ ದೇಶದಲ್ಲಿ ಮುಂದುವರಿಯುತ್ತಿರುವಾಗ, ವಿದೇಶದಲ್ಲಿ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ನೀಡುವುದನ್ನು ಹೇಗೆ ನೋಡಬೇಕು? ಇದು ಕೇವಲ ಭಾಷಣದ ಪ್ರಶ್ನೆಯಲ್ಲ, ಆರ್‌ಎಸ್‌ಎಸ್ ಸಿದ್ಧಾಂತದಲ್ಲಿನ ಪ್ರಾಮಾಣಿಕತೆಯ ಪ್ರಶ್ನೆಯೂ ಆಗಿದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಆರ್‌ಎಸ್‌ಎಸ್ ನಿಜವಾಗಿಯೂ ಮುಸ್ಲಿಮರು ಮತ್ತು ಕ್ರೈಸ್ತರ ವಿರುದ್ಧವಲ್ಲ ಎಂದಾದರೆ, ಅಲ್ಪಸಂಖ್ಯಾತರು ಪದೇಪದೇ ಆರ್‌ಎಸ್‌ಎಸ್–ಬಿಜೆಪಿ ರಾಜಕೀಯದ ಗುರಿಯಾಗುವುದೇಕೆ? ಧರ್ಮದ ಆಧಾರದ ಮೇಲೆ ಮತದಾರರನ್ನು ವಿಭಜಿಸುವ ರಾಜಕೀಯ ನಿರೂಪಣೆಗಳು ಏಕೆ ಬೆಳೆಸಲ್ಪಡುತ್ತಿವೆ ಎಂದು ಅವರು ಪ್ರಶ್ನಿಸಿದ್ದಾರೆ.

ಧಾರ್ಮಿಕ ಗುರುತಿನ ಪ್ರಶ್ನೆಯನ್ನು ಮುಂಚೂಣಿಗೆ ತರುವುದರಿಂದ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಶಿಕ್ಷಣ, ಉದ್ಯೋಗ, ಸಂಪತ್ತು, ಅಧಿಕಾರ ಹಾಗೂ ಪ್ರಾತಿನಿಧ್ಯದಂತಹ ಮೂಲಭೂತ ಸಾಮಾಜಿಕ ನ್ಯಾಯದ ಪ್ರಶ್ನೆಗಳು ಹಿಂದೆ ಸರಿಯುತ್ತವೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

“ವಿದೇಶದ ವೇದಿಕೆಯಲ್ಲಿ ಭಾವೈಕ್ಯತೆ, ದೇಶದೊಳಗೆ ಶತ್ರುತ್ವ—ಈ ದ್ವಂದ್ವವನ್ನು ಭಾರತ ಪ್ರಶ್ನಿಸುತ್ತದೆ. ಭಾಗವತ್ ಅವರ ಮಾತುಗಳು ಪ್ರಾಮಾಣಿಕವಾಗಿದ್ದರೆ, ಅದೇ ಸಂದೇಶ ಭಾರತದ ರಾಜಕೀಯ ಮತ್ತು ಸಾಮಾಜಿಕ ಬದುಕಿನಲ್ಲೂ ಪ್ರತಿಫಲಿಸಬೇಕು. ವಿದೇಶಿ ವೇದಿಕೆಯಲ್ಲಿ ಕೇಳಿಸುವ ಭಾವೈಕ್ಯತೆಯ ಭಾಷೆ ಭಾರತದ ಬೀದಿಗಳಲ್ಲೂ ಕೇಳಿಸಬೇಕು” ಎಂದು ಅವರು ಹೇಳಿದ್ದಾರೆ.

Author

ANU News

Follow Me
Other Articles
Previous

PM Modi meets Armenian counterpart on sidelines of SCO summit

Next

‘Unity abroad, division at home?’: B.K. Hariprasad questions Bhagwat’s remarks, RSS-BJP stance

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • FIR against Rahul Gandhi an attack on democracy, says minister Raghumurthy
    • ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಪ್ರಜಾಪ್ರಭುತ್ವದ ಮೇಲಿನ ದಾಳಿ: ರಘುಮೂರ್ತಿ
    • Valmiki Corporation row: Govt clarifies delay in PF payment to late employee Chandrashekaran
    • ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಇಲಾಖೆ ಸ್ಪಷ್ಟನೆ
    • Railways approves ₹170 crore Kavach 4.0 rollout on 712 route km in Moradabad division
    Copyright 2026 — ANU News. All rights reserved. Blogsy WordPress Theme