Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಸಿನಿಮಾ

‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

By ANU News
June 23, 2026 1 Min Read
0

ಸಮಂತಾ ಋತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ಕುಟುಂಬದೊಂದಿಗೆ ಸಮಂತಾ ಅವರನ್ನು ಮನೆಗೆ ಆಹ್ವಾನಿಸಿ ಆತ್ಮೀಯವಾಗಿ ಸತ್ಕರಿಸಿದ್ದಾರೆ. ತಾಯಿ ಆಗಲಿರುವ ಸಮಂತಾ ಅವರಿಗೆ ವಿಶೇಷ ಉಡುಗೊರೆಗಳೊಂದಿಗೆ ಆಶೀರ್ವಾದವೂ ನೀಡಿದ್ದಾರೆ.

ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ, ಸಮಂತಾ ಅವರಿಗೆ ಸೀರೆ, ಪವಿತ್ರ ವಸ್ತುಗಳು ಹಾಗೂ ಶಂಖವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಮಂತಾಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಚಿರಂಜೀವಿ, “‘ಮಾ ಇಂಟಿ ಬಂಗಾರಂ’ ಚಿತ್ರ ಅತ್ಯಂತ ಆಸಕ್ತಿದಾಯಕವಾಗಿದೆ. ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿನ ಆಕ್ಷನ್ ಮತ್ತು ಭಾವನೆಗಳನ್ನು ನಿರ್ದೇಶಕಿ ನಂದಿನಿ ರೆಡ್ಡಿ ತಮ್ಮ ವಿಶಿಷ್ಟ ಶೈಲಿಯಲ್ಲಿ ಸುಂದರವಾಗಿ ಬೆರೆಸಿದ್ದಾರೆ” ಎಂದು ಪ್ರಶಂಸಿಸಿದ್ದಾರೆ. ಸಮಂತಾ ಅವರ ನಟನೆ, ವಿಶೇಷವಾಗಿ ಸೀರೆಯಲ್ಲಿನ ಆಕ್ಷನ್ ದೃಶ್ಯಗಳು ಗಮನ ಸೆಳೆಯುತ್ತವೆ ಎಂದೂ ಹೇಳಿದ್ದಾರೆ.

ಮಹಿಳಾ ಪ್ರಧಾನ ಮತ್ತು ವೈವಿಧ್ಯಮಯ ಕಥಾವಸ್ತುಗಳಿರುವ ಚಿತ್ರಗಳು ತೆಲುಗು ಚಿತ್ರೋದ್ಯಮಕ್ಕೆ ಅಗತ್ಯವೆಂದು ಉಲ್ಲೇಖಿಸಿದ ಅವರು, ಈ ಯಶಸ್ಸಿಗೆ ಸಮಂತಾ, ನಂದಿನಿ ರೆಡ್ಡಿ, ರಾಜ್ ಹಾಗೂ ಇಡೀ ಚಿತ್ರತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. ಜೊತೆಗೆ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿರುವ ದಂಪತಿ ಸಮಂತಾ ಮತ್ತು ರಾಜ್‌ಗೆ ವಿಶೇಷ ಶುಭಾಶಯಗಳನ್ನು ಕೋರಿದ್ದಾರೆ.

Thank you, Megastar @KChiruTweets Garu ❤️

Your appreciation for #MaaIntiBangaaram means the world to me and my team. It still feels surreal to receive such kind words from you.

So happy that you loved the film ✨ https://t.co/5c58VufEos

— Samantha (@Samanthaprabhu2) June 23, 2026

Author

ANU News

Follow Me
Other Articles
Previous

ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

Next

‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka CM Seeks Centre’s Approval for 13 Key Projects, Meets MPs in New Delhi
    • ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ
    • ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ
    • Over 1.12 Lakh PM-Vidyalaxmi Education Loans Sanctioned Since Launch: Centre
    • ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ
    Copyright 2026 — ANU News. All rights reserved. Blogsy WordPress Theme