Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಹಾವೇರಿ ಬಳಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು

By ANU News
May 5, 2026 1 Min Read
0

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪಲ್ಲಕ್ಕಿ ಬಸ್‌ನಲ್ಲಿ ದೇವರಗುಡ್ಡದ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗುವ ಮುನ್ನವೇ ಚಾಲಕ ಪಕ್ಕೀರಪ್ಪ ಎಚ್ಚೆತ್ತುಕೊಂಡು ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಯುವಂತೆ ಸೂಚಿಸಿದ್ದು, ಇದರಿಂದ ಭಾರಿ ದುರಂತ ತಪ್ಪಿದೆ.

ಆದರೆ ಕೆಲವೇ ನಿಮಿಷಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿದೆ. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Author

ANU News

Follow Me
Other Articles
Previous

‘TVK Era’ Begins in Tamil Nadu; ‘Dalapathy’ Vijay Scripts Stunning Political Rise

Next

ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme