Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶವಿದೇಶ

ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

By ANU News
May 23, 2026 1 Min Read
0

ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಹವಾಯಿ ರಾಜ್ಯದ ಮಾಜಿ ಡೆಮಾಕ್ರಟಿಕ್ ಕಾಂಗ್ರೆಸ್ ಸದಸ್ಯೆಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್ ಅವರನ್ನು ಕಳೆದ ವರ್ಷ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥರಾಗಿ ನೇಮಿಸಿದ್ದರು. ಇದೀಗ ಅವರು ಟ್ರಂಪ್ ಆಡಳಿತದಿಂದ ಹೊರನಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

ತುಳಸಿ ಗಬ್ಬಾರ್ಡ್ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷಗಳ ಕಾಲ ರಾಷ್ಟ್ರೀಯ ಗುಪ್ತಚರ ಇಲಾಖೆಯನ್ನು ಮುನ್ನಡೆಸುವ ಅವಕಾಶ ನೀಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಜೂನ್ 30, 2026ರಿಂದ ರಾಜೀನಾಮೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರದ ಹಿಂದೆ ಕುಟುಂಬದ ಗಂಭೀರ ಆರೋಗ್ಯ ಸಮಸ್ಯೆ ಕಾರಣವಾಗಿದೆ. ಅವರ ಪತಿ ಅಬ್ರಹಾಂ ಅವರಿಗೆ ಅಪರೂಪದ ಮೂಳೆ ಕ್ಯಾನ್ಸರ್ ಇರುವುದು ಇತ್ತೀಚೆಗೆ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

“ನನ್ನ ಪತಿ ಮುಂದಿನ ಕೆಲವು ವಾರಗಳು ಮತ್ತು ತಿಂಗಳುಗಳಲ್ಲಿ ದೊಡ್ಡ ಸವಾಲುಗಳನ್ನು ಎದುರಿಸಬೇಕಿದೆ. ಈ ಸಂದರ್ಭದಲ್ಲಿ ಅವರ ಜೊತೆಯಾಗಿ ನಿಲ್ಲಲು ಮತ್ತು ಸಂಪೂರ್ಣ ಬೆಂಬಲ ನೀಡಲು ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯಬೇಕಾಗಿದೆ” ಎಂದು ತುಳಸಿ ಗಬ್ಬಾರ್ಡ್ ಹೇಳಿದ್ದಾರೆ.

11 ವರ್ಷಗಳ ದಾಂಪತ್ಯ ಜೀವನದಲ್ಲಿ ಪ್ರತಿಯೊಂದು ಹಂತದಲ್ಲೂ ಬೆಂಬಲವಾಗಿ ನಿಂತ ಪತಿಯನ್ನು ಈ ಸಂಕಷ್ಟದ ಸಮಯದಲ್ಲಿ ಏಕಾಂಗಿಯಾಗಿ ಬಿಡಲು ಸಾಧ್ಯವಿಲ್ಲ ಎಂದು ಅವರು ಭಾವನಾತ್ಮಕವಾಗಿ ತಿಳಿಸಿದ್ದಾರೆ.

I am deeply grateful for the trust President Trump placed in me and for the opportunity to lead @ODNIgov for the last year and a half.

Unfortunately, I must submit my resignation, effective June 30, 2026. My husband, Abraham, has recently been diagnosed with an extremely rare… pic.twitter.com/PS0Dxp5zpd

— Tulsi Gabbard 🌺 (@TulsiGabbard) May 22, 2026

ಇನ್ನೊಂದೆಡೆ, ಡೊನಾಲ್ಡ್ ಟ್ರಂಪ್ ಕೂಡ ತುಳಸಿ ಗಬ್ಬಾರ್ಡ್ ಅವರ ರಾಜೀನಾಮೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದು, ತಮ್ಮ ಅವಧಿಯಲ್ಲಿ ಅವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಶಂಸಿಸಿದ್ದಾರೆ.

ಪ್ರಸ್ತುತ ರಾಷ್ಟ್ರೀಯ ಗುಪ್ತಚರ ವಿಭಾಗದ ಪ್ರಧಾನ ಉಪ ನಿರ್ದೇಶಕರಾಗಿರುವ ಆರನ್ ಲುಕಾಸ್ ಹಂಗಾಮಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಟ್ರಂಪ್ ಆಡಳಿತ ಪ್ರಕಟಿಸಿದೆ.

Author

ANU News

Follow Me
Other Articles
Previous

ರಾಜ್ಯಸಭೆಗೆ ದೇವೇಗೌಡ ಮರುಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

Next

ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme