Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ

By ANU News
August 6, 2026 1 Min Read
0

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರನ್ನು ಸೂಚಿಸಿದ ಬೆನ್ನಲ್ಲೇ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ್ದರು. ರಾಜೀನಾಮೆ ನೀಡದಿದ್ದರೆ ಅವಿಶ್ವಾಸ ನಿರ್ಣಯ ತರಲಾಗುವುದು ಎಂದು ತಿಳಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೊರಟ್ಟಿ, ಗೌರವ ಕಳೆದುಕೊಳ್ಳಲು ಇಷ್ಟವಿಲ್ಲದ ಕಾರಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹೊರಟ್ಟಿ ತಿಳಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಟ್ಟಿಯನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹೊರಟ್ಟಿಯವರು ತಾವಾಗಿಯೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಪ್ರಸಕ್ತ ಮೇಲ್ಮನೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ. ಪರಿಪೂರ್ಣ ಬಹುಮತ ಹಿನ್ನೆಲೆಯಲ್ಲಿ, ಹಾಲಿ ಸಭಾಪತಿ ರಾಜೀನಾಮೆ ನೀಡುವ ಮುನ್ನವೇ ಸಲೀಂ ಅಹ್ಮದ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕಾಂಗ್ರೆಸ್ ಪಕ್ಷದ ನಡೆ ಮೇಲ್ಮನೆಯ ಘನತೆಗೆ ಧಕ್ಕೆ ತರುವಂತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರು ಟೀಕಿಸಿದ್ದಾರೆ.

Author

ANU News

Follow Me
Other Articles
Previous

DRI busts bid to import banned Pakistan goods through UAE, seizes ₹3 crore consignment

Next

ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Be prepared for El Nino impact, Andhra CM Chandrababu Naidu tells Andhra officials
    • ಹವಾಮಾನ ಬದಲಾವಣೆ: ಸಮುದಾಯ ಆಧಾರಿತ ಸ್ಥಿತಿಸ್ಥಾಪಕತ್ವಕ್ಕೆ ಮುರ್ಮು ಕರೆ
    • Climate change: President Murmu calls for stronger community-led resilience
    • ಕಸ್ತೂರಿ ರಂಗನ್ ವರದಿ ವಿಚಾರ: ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರಕ್ಕೆ ತೆರಳಿ ರೈತರ ಧ್ವನಿ ಮುಟ್ಟಿಸುತ್ತೇವೆ: ಡಿಕೆಶಿ
    • Drought row: H.K. Patil’s resignation threat gives BJP fresh ammunition against Karnataka govt
    Copyright 2026 — ANU News. All rights reserved. Blogsy WordPress Theme