Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ವಿದೇಶ

ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

By ANU News
June 27, 2026 1 Min Read
0

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರ ಕದನ ವಿರಾಮ ಹಾಗೂ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯುವ ಕುರಿತು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ಘಟನೆ ಮತ್ತೆ ಉದ್ವಿಗ್ನತೆ ಹೆಚ್ಚಿಸಿದೆ.

ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಇರಾನ್‌ನ ಕ್ಷಿಪಣಿ ಉಡಾವಣಾ ಕೇಂದ್ರಗಳು, ಡ್ರೋನ್ ತಾಣಗಳು ಹಾಗೂ ಕರಾವಳಿ ರಾಡಾರ್ ವ್ಯವಸ್ಥೆಗಳ ಮೇಲೆ ನಿಖರ ವಾಯುದಾಳಿ ನಡೆಸಿರುವುದಾಗಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ, ಹಾರ್ಮುಜ್ ಜಲಸಂಧಿಯ ನಿಯಂತ್ರಣ ಇರಾನ್‌ನಲ್ಲಿದ್ದು, ಅದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಹೇಳಿದ್ದಾರೆ.

ಈ ಬೆಳವಣಿಗೆಯಿಂದ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಬಳಿಕ ಹಡಗುಗಳ ಸಂಚಾರ ನಿಧಾನಗೊಂಡಿದ್ದು, ಕೆಲವು ತೈಲ ಟ್ಯಾಂಕರ್‌ಗಳು ಮಾರ್ಗ ಮಧ್ಯದಲ್ಲೇ ಹಿಂದಿರುಗಿರುವುದಾಗಿ ವರದಿಯಾಗಿದೆ.

ಅಂತರರಾಷ್ಟ್ರೀಯ ಸಾಗರ ಸಂಸ್ಥೆ (IMO) ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಆರಂಭಿಸಿದ್ದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ 115 ಹಡಗುಗಳು ಜಲಸಂಧಿಯಿಂದ ಹೊರಬಂದಿದ್ದರೂ, ಇನ್ನೂ ಸುಮಾರು 500 ಹಡಗುಗಳು ಆ ಪ್ರದೇಶದಲ್ಲೇ ಸಿಲುಕಿಕೊಂಡಿವೆ ಎಂದು ಸಂಸ್ಥೆ ತಿಳಿಸಿದೆ.

Author

ANU News

Follow Me
Other Articles
Previous

K’taka govt orders safety measures at Muthathi after Cauvery drowning tragedy

Next

US strikes Iran after drone attack; tensions flare again in Strait of Hormuz

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme