Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಎಕ್ಸ್‌ಪ್ರೆಸ್‌ವೇನಲ್ಲಿ ಧಗಧಗಿಸಿದ ಕಾರು; ಒಂದೇ ಕುಟುಂಬದ ಐವರು ಸಜೀವ ದಹನ

By ANU News
April 30, 2026 1 Min Read
0

ಜೈಪುರ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತ ದೇಶವನ್ನೇ ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ.

ಮೃತರನ್ನು ಶಿಯೋಪುರ ಮೂಲದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಹಾಗೂ ಒಂದು ಮಗು ಸೇರಿದ್ದಾರೆ. ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೆಳಗಿನ ಜಾವ ಸುಮಾರು 1 ಗಂಟೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ವಾಹನ ಬೆಂಕಿಗಾಹುತಿಯಾಗಿದೆ.

ಅಪಘಾತದ ವೇಳೆ ಚಾಲಕ ವಿನೋದ್ ಕುಮಾರ್ ಮೆಹರ್ ವಾಹನದಿಂದ ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದರೂ, ಶೇ.80ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

🔴#BREAKING | गाजियाबाद के राजनगर के पुल के पास एक होंडा सिटी कार में लगी आग #Ghaziabad #fire @ghaziabadpolice @ghaziabadfire #uttarpradesh #Ghaziabadfire #Breaking #Carburning pic.twitter.com/fsqsu6mhNY

— Journalist Ravendra kumar (@Chhotukingoffi1) April 29, 2026

Author

ANU News

Follow Me
Other Articles
Previous

No CM Change Now, Says Kharge; High Command Signals Stability

Next

ICSE, ISC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆನ್‌ಲೈನ್, SMS ಮೂಲಕ ಸಿಗಲಿದೆ ರಿಸಲ್ಟ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme