Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಐಪಿಎಲ್ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಜಯಭೇರಿ

By ANU News
April 29, 2026 1 Min Read
0

ಚಂಡೀಗಢ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಮುಲ್ಲನ್‌ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿ ಬೃಹತ್ ಮೊತ್ತ ದಾಖಲಿಸಿತು.

ಪಂಜಾಬ್ ಪರ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ 59 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದರೆ, ಪ್ರಿಯಾಂಶ್ ಆರ್ಯ 29 ರನ್ ಗಳಿಸಿದರು. ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕೂಪರ್ ಕನೋಲಿ ತಲಾ 30 ರನ್‌ಗಳ ಕೊಡುಗೆ ನೀಡಿದರು. ಅಂತಿಮವಾಗಿ ಮಾರ್ಕಸ್ ಸ್ಟೋಯ್ನಿಸ್ ಅಜೇಯ 62 ರನ್ ಸಿಡಿಸಿ ತಂಡದ ಮೊತ್ತವನ್ನು 220ರ ಗಡಿದಾಟಿಸಿದರು.

ಬೌಲಿಂಗ್‌ನಲ್ಲಿ ರಾಜಸ್ಥಾನ ಪರ ಯಶ್ ರಾಜ್ 2 ವಿಕೆಟ್ ಪಡೆದುಕೊಂಡರೆ, ಜೋಫ್ರಾ ಆರ್ಚರ್ ಮತ್ತು ಬರ್ಗರ್ ತಲಾ 1 ವಿಕೆಟ್ ಕಬಳಿಸಿದರು.

223 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ವೈಭವ್ ಸೂರ್ಯವಂಶಿ 43 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 51 ರನ್‌ಗಳ ಅರ್ಧಶತಕ ಬಾರಿಸಿದರು. ಮಧ್ಯಕ್ರಮದಲ್ಲಿ ಡೊನೊವನ್ ಫೆರೇರಾ ಸ್ಫೋಟಕ ಆಟದ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ತಂಡ 19.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿ ಆರು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

Author

ANU News

Follow Me
Other Articles
Previous

Talawara ST certificates being blocked, alleges BJP MLC Ravi Kumar

Next

ಮೇ 4 ಮತ ಎಣಿಕೆ ಹಿನ್ನೆಲೆ: ತಮಿಳುನಾಡು ಪೊಲೀಸರ ಎಲ್ಲಾ ರಜೆ ರದ್ದು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme