Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Others

‘ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ’

By Anu News
June 12, 2026 1 Min Read
0

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ.

​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ದುರುಪಯೋಗವನ್ನು ತಡೆಯುವ ಕೆಲಸವನ್ನು ಸರಕಾರದಿಂದ ಮಾಡಲಾಗುತ್ತಿದೆ ಎಂದು ಹೇಳಿದರು.

​”ಮೃತಪಟ್ಟವರ ಖಾತೆಗಳಿಗೆ ಸರ್ಕಾರದ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಯೋಜನೆಯನ್ನು ಸದ್ವಿನಿಯೋಗಪಡಿಸಿಕೊಳ್ಳಲು ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರಿಗೆ ನಾನು ಈ ಹಿಂದೆ ಲಿಖಿತ ಮನವಿಯೊಂದನ್ನು ಸಲ್ಲಿಸಿ, ಫಲಾನುಭವಿಗಳಿಗೆ ‘ಜೀವಿತ ಪ್ರಮಾಣ ಪತ್ರ’ (Life Certificate) ಕಡ್ಡಾಯಗೊಳಿಸುವಂತೆ ಕೋರಿದ್ದೆ. ಅದೇ ರೀತಿ, ಪ್ರಸ್ತುತ ಮುಖ್ಯಮಂತ್ರಿಗಳಾಗಿರುವ ಡಿ.ಕೆ. ಶಿವಕುಮಾರ್ ಅವರಿಗೂ ಸಹ ಈ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಮೃತಪಟ್ಟವರು ಹಾಗೂ ಅನರ್ಹರನ್ನು ಯೋಜನೆಯಿಂದ ಹೊರಗಿಡುವ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಪರಿಷ್ಕರಣೆ (Auditing/Verification) ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

​ಮುಖ್ಯಮಂತ್ರಿಗಳು ಈ ಮನವಿಯನ್ನು ಪುರಸ್ಕರಿಸಿ ಯೋಜನೆಯ ಪರಿಷ್ಕರಣೆಗೆ ಮುಂದಾಗಿದ್ದಾರೆ. ಈ ಪ್ರಕ್ರಿಯೆಯ ಮೂಲ ಉದ್ದೇಶ ಮೃತಪಟ್ಟ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಸರ್ಕಾರದ ಹಣ ದುರುಪಯೋಗವಾಗುವುದನ್ನು ತಪ್ಪಿಸುವುದೇ ಆಗಿದೆ. ​ಯಾವುದೇ ಕಾರಣಕ್ಕೂ ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ಈ ಯೋಜನೆಯಿಂದ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ನಷ್ಟವಾಗಲಿ ಸಂಭವಿಸುವುದಿಲ್ಲ. ವಿರೋಧ ಪಕ್ಷದವರು ರಾಜಕೀಯ ಪ್ರೇರಿತ ಅಪಪ್ರಚಾರಗಳನ್ನು ನಂಬಬಾರದು ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

Author

Anu News

Follow Me
Other Articles
Previous

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

Next

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka govt weighs cloud seeding to tackle rain deficit, reservoir inflows
    • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ
    • Tribal languages, culture need urgent preservation: K’taka minister T Raghumurthy
    • ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ
    • New legal framework for Karnataka apartment communities: BAF hails KAOMA 2026 as ‘new beginning’ for stronger governance
    Copyright 2026 — ANU News. All rights reserved. Blogsy WordPress Theme