Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶಪ್ರಾದೇಶಿಕ

ಜಲ ಜೀವನ ಮಿಷನ್ 2.0: ಕೇಂದ್ರ-ರಾಜ್ಯ ಸಹಕಾರ ಒಪ್ಪಂದಕ್ಕೆ ಅಂಕಿತ

By ANU News
May 1, 2026 1 Min Read
0

ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ನಡುವೆ ಜಲ ಜೀವನ ಮಿಷನ್ 2.0 ಅಡಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹಾಜರಿದ್ದರು.

ಈ ಸಂದರ್ಭದಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಕುರಿತಂತೆ ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಈ ಒಪ್ಪಂದವು ಜಲ ಸಂಪನ್ಮೂಲಗಳ ಸಂರಕ್ಷಣೆ, ಪರಿಣಾಮಕಾರಿ ಕಾರ್ಯಾಚರಣೆ ಮತ್ತು ನಿರ್ವಹಣೆ, ನೀರಿನ ಗುಣಮಟ್ಟ ನಿರ್ವಹಣೆ ಮತ್ತು ದೀರ್ಘಕಾಲೀನ ನೀರಿನ ಸುರಕ್ಷತೆಯ ಕಡೆಗೆ ಕೇಂದ್ರ-ರಾಜ್ಯ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ, ಕರ್ನಾಟಕ ರಾಜ್ಯದಲ್ಲಿನ ಜಲ ಜೀವನ್ ಮಿಷನ್‌ನ ಪರಿಣಾಮಕಾರಿ ಮತ್ತು ಗುಣಮಟ್ಟದ ಅನುಷ್ಠಾನಕ್ಕಾಗಿ ವಿವಿಧ ಪ್ರಮುಖ ಸಲಹೆಗಳನ್ನು ಸಹ ವಿವರವಾಗಿ ಚರ್ಚಿಸಲಾಯಿತು ಎಂದವರು ವಿವರಿಸಿದರು.

Author

ANU News

Follow Me
Other Articles
Previous

ವಾಣಿಜ್ಯ LPG ಸಿಲಿಂಡರ್ ಭಾರೀ ದುಬಾರಿ; ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೊರೆ ಹೆಚ್ಚಳ

Next

‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    • ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ
    • 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
    Copyright 2026 — ANU News. All rights reserved. Blogsy WordPress Theme