Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

By ANU News
May 26, 2026 1 Min Read
0

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗದ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.

ಬೆಂಗಳೂರು ಹೊರವಲಯದ ಮಾದಾವರ ಮೆಟ್ರೋ ನಿಲ್ದಾಣದಿಂದ ತುಮಕೂರುವರೆಗೆ ಹಸಿರು ಮಾರ್ಗವನ್ನು 59.60 ಕಿಲೋಮೀಟರ್ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ಯೋಜನೆ ಪೂರ್ಣಗೊಂಡರೆ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ಪ್ರತಿ ಗಂಟೆಗೆ ಒಂದು ದಿಕ್ಕಿನಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

2024-25ರ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಯನ್ನು ಘೋಷಿಸಿದ್ದರು. ಯೋಜನೆಯ ಮೊದಲ ಹಂತಕ್ಕೆ ಸುಮಾರು ₹20,649 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ.

ಯೋಜನೆ ಅನುಷ್ಠಾನಗೊಂಡರೆ ಹೊಸ ಮೆಟ್ರೋ ಕಾರಿಡಾರ್‌ ನೆಲಮಂಗಲ, ದಾಬಸ್‌ಪೇಟೆ ಹಾಗೂ ಕ್ಯಾತ್ಸಂದ್ರ ಮಾರ್ಗವಾಗಿ ಸಾಗಲಿದೆ.

ಡಿಪಿಆರ್ ಪ್ರಕಾರ, ಈ ಮಾರ್ಗದಲ್ಲಿ ಮಾದಾವರ, ಮಾಕಳಿ, ದಾಸನಪುರ, ನೆಲಮಂಗಲ, ನೆಲಮಂಗಲ ಟೋಲ್‌ಗೇಟ್, ಬೂದಿಹಾಳ್, ಟಿ. ಬೇಗೂರು, ತಿಪ್ಪಗೊಂಡನಹಳ್ಳಿ, ಮಹಿಮಾಪುರ, ದಾಬಸ್‌ಪೇಟೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಕ್ಯಾತ್ಸಂದ್ರ, ಎಸ್‌ಐಟಿ, ತುಮಕೂರು ಬಸ್ ನಿಲ್ದಾಣ, ಟೂಡಾ ಲೇಔಟ್ ಹಾಗೂ ಶಿರಾ ಗೇಟ್ ಸೇರಿದಂತೆ ಹಲವು ನಿಲ್ದಾಣಗಳು ಇರಲಿವೆ.

ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ (Detailed Project Report) ವರದಿಯನ್ನು ವಿಧಾನಸೌಧದಲ್ಲಿ ಸ್ವೀಕರಿಸಿದೆ.

ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿಯನ್ನು ಕ್ಯಾಬಿನೆಟ್‌‌ ಮುಂದಿಟ್ಟು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ… pic.twitter.com/MzJrnAiPWM

— Dr. G Parameshwara (@DrParameshwara) May 23, 2026

Author

ANU News

Follow Me
Other Articles
Previous

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

Next

ಐಪಿಎಲ್ 2026: ಗುಜರಾತ್‌ಗೆ ಭಾರೀ ಸೋಲುಣಿಸಿ ಫೈನಲ್‌ಗೆ ಆರ್‌ಸಿಬಿ ಎಂಟ್ರಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme