Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಸಿನಿಮಾ

ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

By ANU News
July 23, 2026 1 Min Read
0

ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿರುವ ಅವರು, ಈ ಹೋರಾಟಕ್ಕೆ ಯಾವುದೇ ರಾಜಕೀಯ ಬಣ್ಣ ಬಳಿಯಬಾರದು ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, ಆರಂಭದಲ್ಲಿ ಶಾಂತಿಯುತವಾಗಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿರುವುದು ಬೇಸರ ತಂದಿದೆ. ಈ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳೊಂದಿಗೆ ತಮ್ಮ ಸಹಾನುಭೂತಿ ಇದೆ ಎಂದು ಹೇಳಿದ್ದಾರೆ.

Oplus_16908288

ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ದೇಶದ ವಿದ್ಯಾರ್ಥಿಗಳು ಒಂದಾಗಿ ಹೋರಾಡುತ್ತಿರುವುದು ಸಂತಸದ ಸಂಗತಿ. ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ರೂಪಿಸಬೇಕೆಂಬ ವಿದ್ಯಾರ್ಥಿಗಳ ಸಮರ್ಪಣೆ ಹಾಗೂ ಪ್ರಾಮಾಣಿಕತೆ ಶ್ಲಾಘನೀಯ ಎಂದು ಅವರು ಹೇಳಿದ್ದಾರೆ.

It was such a peaceful movement, feel so sad that it had to take a violent turn. My heart goes out to the students and their families who were hurt. Paper leak is a very serious issue, and I am glad to know n see that the kids of our country have come together for a better…

— Salman Khan (@BeingSalmanKhan) July 22, 2026


ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ವಿಚಾರವಾಗಿದ್ದು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಈ ಹೋರಾಟದ ಸಂಪೂರ್ಣ ಗೌರವ ವಿದ್ಯಾರ್ಥಿಗಳಿಗೇ ಸಲ್ಲಬೇಕು. ಸರ್ಕಾರವೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಲ್ಮಾನ್ ಖಾನ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಭಾರತ ಜಾಗತಿಕ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಬೇಕು. ವಿದೇಶಗಳಿಂದಲೂ ವಿದ್ಯಾರ್ಥಿಗಳು ಭಾರತಕ್ಕೆ ಬಂದು ಶಿಕ್ಷಣ ಪಡೆಯುವಂತ ವಾತಾವರಣ ನಿರ್ಮಾಣವಾಗಲಿ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

Author

ANU News

Follow Me
Other Articles
Previous

Salman Khan Backs Students’ Peaceful Protest Against NEET Paper Leak

Next

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಭಾರತೀಯ ಸಂಶೋಧಕರಿಂದ ಸಿಂಗಲ್‌-ಪೀಸ್‌ ಡೆಂಟಲ್‌ ಇಂಪ್ಲಾಂಟ್; ಶಸ್ತ್ರಚಿಕಿತ್ಸೆಗಳ ಸಂಖ್ಯೆ ಕಡಿಮೆ ಮಾಡುವ ಹೊಸ ತಂತ್ರಜ್ಞಾನ
    • Single-piece dental implant developed by Indian researchers could cut down surgeries
    • ದೇವನಹಳ್ಳಿಯಲ್ಲಿ ₹156 ಕೋಟಿ MSME ತಂತ್ರಜ್ಞಾನ ಕೇಂದ್ರ
    • ₹156-crore MSME Technology Centre to open in Devanahalli, focus on electronics and aerospace skills
    • ಭಾರತದಲ್ಲಿ ಜಾನುವಾರುಗಳ ಗಡ್ಡೆ ಚರ್ಮ ರೋಗ ನಿಯಂತ್ರಣದಲ್ಲಿದೆ: ಕೇಂದ್ರ
    Copyright 2026 — ANU News. All rights reserved. Blogsy WordPress Theme