Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

By ANU News
July 27, 2026 1 Min Read
0

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯದ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನರ್ಹ ಕಾರ್ಡ್‌ಗಳನ್ನು ಮಾತ್ರ ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದರು.

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ 4.42 ಕೋಟಿ ಫಲಾನುಭವಿಗಳಿಗೆ 10 ಕೆಜಿ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಕಾಳಸಂತೆಯನ್ನು ತಡೆಯಲು ಗೋದಾಮುಗಳಲ್ಲಿ ಸಿಸಿಟಿವಿ ಹಾಗೂ ಪಡಿತರ ಸಾಗಣೆ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ ಎಂದರು. ಅಕ್ರಮ ತಡೆಗಾಗಿ 1,497 ಎಫ್‌ಐಆರ್‌ ದಾಖಲಿಸಿ, ಸುಮಾರು ₹50 ಕೋಟಿ ಮೌಲ್ಯದ ಪಡಿತರ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಎಂಎಸ್‌ಪಿ ಯೋಜನೆಯಡಿ 5.60 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಿ ವಿತರಣೆ ಮಾಡಲಾಗುತ್ತಿದ್ದು, ಇಂದಿರಾ ಕಿಟ್ ವಿತರಣೆಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು ₹6,000 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಎರಡು ತಿಂಗಳಲ್ಲಿ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ 20,259 ನ್ಯಾಯಬೆಲೆ ಅಂಗಡಿಗಳಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿ ಫಲಕ ಅಳವಡಿಸುವ ಕುರಿತು ಚರ್ಚೆ ನಡೆದಿದ್ದು, ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ 1967 ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಸಚಿವರು ತಿಳಿಸಿದರು.

Author

ANU News

Follow Me
Other Articles
Previous

ಕಾಮನ್‌ವೆಲ್ತ್: ಮಹಿಳೆಯರ 48 ಕೆಜಿ ವೇಟ್‌ಲಿಫ್ಟಿಂಗ್’ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು

Next

PM Modi praises Rishikanta Singh Chanambam for silver medal and personal best

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • IMD issues orange alert for Karnataka coast; heavy rain likely till July 30
    • ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್
    • ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ
    • Centre says Karnataka yet to submit proposal for second Bengaluru airport
    • Male Mahadeshwara Kshetra to be developed as plastic-free pilgrimage centre
    Copyright 2026 — ANU News. All rights reserved. Blogsy WordPress Theme