Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶ

ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ; ಚುನಾವಣಾ ಆಯೋಗ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

By Anu News
June 10, 2026 1 Min Read
0

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಕೇಂದ್ರ ಸರ್ಕಾರದ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ.

ಮಂಗಳವಾರ ಸಂಜೆ ಭಾರತ ಚುನಾವಣಾ ಆಯೋಗ ಕಚೇರಿ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹಾಗೂ ಭದ್ರತಾ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನೆಗೆ ಪೂರ್ವಾನುಮತಿ ಇಲ್ಲದ ಕಾರಣ ಕೆಲ ನಾಯಕರನ್ನು ಕಚೇರಿಗೆ ಪ್ರವೇಶಿಸಲು ತಡೆಯಲಾಯಿತು.

Democracy cannot survive when constitutional institutions are reduced to instruments of political convenience.

The rejection of Congress Rajya Sabha candidate Meenakshi Natarajan ji's nomination from Madhya Pradesh raises serious questions about the fairness of our democratic… pic.twitter.com/E3BOYFo8CE

— Congress (@INCIndia) June 9, 2026

ಪ್ರತಿಭಟನೆಯಲ್ಲಿ ಕೆ.ಸಿ. ವೇಣುಗೋಪಾಲ್, ಭೂಪೇಶ್ ಬಘೇಲ್ ಹಾಗೂ ಸಚಿನ್ ಪೈಲಟ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇಣುಗೋಪಾಲ್, “ಇದು ಪ್ರಜಾಪ್ರಭುತ್ವದ ಮೂಲಭೂತ ಪ್ರಶ್ನೆ. ಚುನಾವಣಾ ಆಯೋಗದೊಂದಿಗೆ ಭೇಟಿಗೆ ಸಮಯ ಕೇಳಿದ್ದರೂ ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ನಮಗೆ ನ್ಯಾಯ ಬೇಕು, ಅಗತ್ಯವಿದ್ದರೆ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ” ಎಂದು ಹೇಳಿದರು.

At 7:25 PM, we submitted a letter to the Election Commission of India seeking an appointment with the Election Commission to file a complaint.

Even after 40 minutes, we are not being allowed to meet them.

What is happening in this country? Is this a banana republic? We need… pic.twitter.com/1i1ePFoXbe

— Congress (@INCIndia) June 9, 2026

ಸಚಿನ್ ಪೈಲಟ್ ಮಾತನಾಡಿ, “ಮೀನಾಕ್ಷಿ ನಟರಾಜನ್ ವಿರುದ್ಧ ಯಾವುದೇ ಎಫ್‌ಐಆರ್ ಅಥವಾ ಚಾರ್ಜ್‌ಶೀಟ್ ಇಲ್ಲ. ಆದರೂ ಯಾವುದೇ ಸಮರ್ಪಕ ಕಾರಣವಿಲ್ಲದೆ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾವು ಗೆಲ್ಲುವ ಸಾಧ್ಯತೆಯಿದ್ದ ಸ್ಥಾನದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಪಿಸಿದರು.

ನಾಮಪತ್ರ ತಿರಸ್ಕಾರದ ಕಾರಣಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೇಳಿದ್ದು, ವಿಷಯವು ರಾಜಕೀಯ ಚರ್ಚೆಗೆ ಕಾರಣವಾಗಿದೆ.

Author

Anu News

Follow Me
Other Articles
Previous

SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

Next

ನೆಹರು ದಾಖಲೆ ಮೀರಿದ ಮೋದಿ; ನಿರಂತರ ಅಧಿಕಾರಾವಧಿಯಲ್ಲಿ ಹೊಸ ಮೈಲಿಗಲ್ಲು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ
    • ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
    • ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು
    • ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ
    • ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್
    Copyright 2026 — ANU News. All rights reserved. Blogsy WordPress Theme