Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

By Anu News
September 2, 2026 1 Min Read
0

ಗದಗ, ಸೆ. 2: 2028ರಿಂದ ಮುಂದಿನ 8ರಿಂದ 10 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರಕ್ಕೆ ಬುಧವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸುಮಾರು ಅರ್ಧ ಗಂಟೆ ಪೂಜೆ-ಪ್ರಾರ್ಥನೆ ನಡೆಸಿದರು.

ಬಳಿಕ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಬೇಕು ಎಂಬುದು ತಮ್ಮ ಪ್ರಾರ್ಥನೆಯಾಗಿದೆ ಎಂದರು. ಗದಗ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಹತ್ತಿ, ಮೆಣಸಿನಕಾಯಿ, ಕಡಲೆ ಸೇರಿದಂತೆ ಯಾವುದೇ ಬೆಳೆಗಳು ರೈತರ ಕೈಗೆ ಸಿಗುತ್ತಿಲ್ಲ ಎಂದು ಹೇಳಿದರು.

ಹೆಲಿಕಾಪ್ಟರ್‌ನಲ್ಲಿ ಗದಗಕ್ಕೆ ಆಗಮಿಸುವಾಗ ಹೊಲಗಳನ್ನು ಗಮನಿಸಿದ್ದು, ಬಹುತೇಕ ಜಮೀನುಗಳು ಖಾಲಿಯಾಗಿರುವುದು ಕಂಡುಬಂದಿದೆ. ಆಲಮಟ್ಟಿ ಹೊರತುಪಡಿಸಿ ಹೆಚ್ಚಿನ ಕಡೆ ನೀರಿನ ಸಮಸ್ಯೆ ಇದೆ. ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದೆ ಎಂದು ತಿಳಿಸಿದರು.

ಮುಕ್ತಿ ಮಂದಿರ ತಮ್ಮ ಹೃದಯಕ್ಕೆ ಹತ್ತಿರವಾದ ಸ್ಥಳವಾಗಿದ್ದು, ವೀರಗಂಗಾಧರ ಅಜ್ಜನವರ ಐಕ್ಯ ಸ್ಥಳವಾಗಿದೆ. ಎಲ್ಲ ಧರ್ಮಗಳನ್ನೂ ಗೌರವಿಸಿ, ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಇದೇ ವೇಳೆ ಪೂಜೆ ಬಳಿಕ ಮಾತನಾಡಿದ ನೊಣವಿನಕೆರೆ ಅಜ್ಜಯ್ಯ, ಡಿ.ಕೆ. ಶಿವಕುಮಾರ್ ಅವರ ಆರೋಗ್ಯ, ಆಯುಷ್ಯ ಹಾಗೂ ಮುಂದಿನ ಅಭಿವೃದ್ಧಿಗಾಗಿ ವಿಶೇಷ ಸಂಕಲ್ಪ ಮಾಡಲಾಗಿದೆ ಎಂದರು.

2028ರಿಂದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಆಳ್ವಿಕೆಯಲ್ಲಿ ಇರುವಂತೆ ಪೂಜೆ ಸಲ್ಲಿಸಲಾಗಿದೆ. ಮುಂದಿನ 8ರಿಂದ 10 ವರ್ಷಗಳ ಕಾಲ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಭವಿಷ್ಯ ನುಡಿದರು.

Author

Anu News

Follow Me
Other Articles
Previous

ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

Next

DK Shivakumar offers prayers at Mukti Mandir, seer predicts 2028 return as Karnataka CM

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!
    • KR Market entry fee: Goods vehicles may have to pay up to Rs 350 under 10-year smart gate deal
    • No suitable clouds for cloud seeding yet, Karnataka experts advise govt to wai
    • ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ
    • DK Shivakumar offers prayers at Mukti Mandir, seer predicts 2028 return as Karnataka CM
    Copyright 2026 — ANU News. All rights reserved. Blogsy WordPress Theme