Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ

By ANU News
April 25, 2026 1 Min Read
0

ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್) – 175
  • ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್) – 30
  • ಜೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – 25
  • ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು) – 10
  • ಕಾರ್ಯದರ್ಶಿ (Secretary) – 08
  • ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ) – 02

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ), ಸಿಎ/ಸಿಎಮ್ಎ (ಅಕೌಂಟ್ಸ್ ವಿಭಾಗಕ್ಕೆ) ಅಥವಾ ಎಂ.ಎ/ಎಂ.ಎಸ್ಸಿ (ಇತರ ವಿಭಾಗಗಳಿಗೆ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ.

ಏಪ್ರಿಲ್ 1, 2026ರಂತೆ ಅಭ್ಯರ್ಥಿಗಳ ವಯಸ್ಸು 30 ರಿಂದ 35 ವರ್ಷಗಳೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಆಧಾರದ ಮೇಲೆ ತಿಂಗಳಿಗೆ ₹30,000ರಿಂದ ₹1,40,000ರವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ ಸಾಮಾನ್ಯ, OBC ಹಾಗೂ EWS ಅಭ್ಯರ್ಥಿಗಳಿಗೆ ₹1180 ಆಗಿದ್ದು, SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಹಂತಗಳು ಒಳಗೊಂಡಿವೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2026 ಆಗಿದ್ದು, ಆಸಕ್ತರು BPCL ಅಧಿಕೃತ ವೆಬ್‌ಸೈಟ್ Job Openings | Official Website of BPCL, India ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

Author

ANU News

Follow Me
Other Articles
Previous

ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

Next

ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆ NCL ನಲ್ಲಿ ಉದ್ಯೋಗಾವಕಾಶ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’ ರಾಷ್ಟ್ರವ್ಯಾಪಿ ಯುವ ಆಂದೋಲನ; ಪ್ರಧಾನಿ ಮೋದಿ ಕರೆ
    • ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
    • K’taka won’t compromise farmers’ interests on Cauvery: DK urges groups to withdraw bandh call
    • ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ
    • Amicable solution is priority in Cauvery dispute: K’taka CM D.K. Shivakumar at all-party meeting
    Copyright 2026 — ANU News. All rights reserved. Blogsy WordPress Theme