Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Others

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

By Anu News
May 31, 2026 2 Min Read
0

ಬೆಂಗಳೂರು: ‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು. ರಾಜ್ಯವನ್ನು ಮುನ್ನಡೆಸಲು ಬೇಕಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ನೂತನ ಆಗಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅಭಯದ ಮಾತುಗಳನ್ನು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ’ ಎಂದಿರುವ ಸಿದ್ದರಾಮಯ್ಯ, ‘ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ’ ಎಂದು ಡಿಕೆಶಿ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದಿರುವ ಸಿದ್ದರಾಮಯ್ಯ, ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಡಿಕೆಶಿಗೆ ಕಿವಿಮಾತು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು. ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ ಎಂದು ಸಿದ್ದರಾಮಯ್ಯ ಅವರಿ ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ… pic.twitter.com/Hlep9qJaGF

— Siddaramaiah (@siddaramaiah) May 30, 2026

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ ಎಂದಿರುವ ಸಿದ್ದರಾಮಯ್ಯ, ‘ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ’ ಎಂದಿದ್ದಾರೆ.

Author

Anu News

Follow Me
Other Articles
Previous

Three minor boys drown in lake near Dharwad village

Next

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
    • Sugar prices spark political row: Kharge questions Centre, govt rejects ethanol link
    • 3. Pellet gun case: Priyank Kharge questions delay in filing FIR
    • ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
    • ‘Phoenix’ film row: Om Prakash Rao accused of not returning ₹3.85 crore
    Copyright 2026 — ANU News. All rights reserved. Blogsy WordPress Theme