Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

By Anu News
June 5, 2026 1 Min Read
0

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ತಮಗೆ ನಿರೀಕ್ಷಿತ ಖಾತೆ ನೀಡದಿರುವುದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದರು. “ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

#WATCH | Bengaluru | Ramalinga Reddy resigns as Karnataka Minister, says, "I am still in the Congress party; I have not resigned from the party. I have been in the Congress party for the past 53 years. I have handled several responsibilities within the party.I have served as a… pic.twitter.com/5SnASNSpJl

— ANI (@ANI) June 5, 2026

ಖಾತೆ ಹಂಚಿಕೆ ಕುರಿತಂತೆ ಅವರು ಗುರುವಾರವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆದರೂ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ಅವರಿಗೆ ನೀಡಿತ್ತು.

ತಮಗೆ ಬೇಕಿದ್ದ ಖಾತೆ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಬಿದ್ದಿರುವುದು ಸರ್ಕಾರಕ್ಕೆ ಮೊದಲ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Author

Anu News

Follow Me
Other Articles
Previous

ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

Next

E85 ಇಂಧನ ಬಿಡುಗಡೆ; ದೇಶಾದ್ಯಂತ ವಿಸ್ತರಣೆಗೆ ಕೇಂದ್ರದ ಯೋಜನೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ
    • President Murmu inaugurates green, digital and child-friendly projects at Rashtrapati Bhavan
    • Cauvery water release: K’taka MLA urges appeal to CWMA citing low reservoir levels
    • Flood situation improves in Assam, but 5 lakh remain in distress
    • ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ
    Copyright 2026 — ANU News. All rights reserved. Blogsy WordPress Theme