Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Regional

ಸೂರಜ್ ಹೆಗ್ಡೆ ನಿಧನಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

By Anu News
June 8, 2026 1 Min Read
0

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಸೂರಜ್ ಹೆಗ್ಡೆ ಅವರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ ಎಂದು ಹೇಳಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಅವರು ಅಗಲಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಕಂಬನಿ ಮಿಡಿದಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗನಾದ ಸೂರಜ್ ಹೆಗ್ಡೆ, ತಮ್ಮ ತಾತನ ಹೆಜ್ಜೆ ಗುರುತುಗಳನ್ನು ಅನುಸರಿಸಿ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸುತ್ತಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಎಐಸಿಸಿ ಕಾರ್ಯದರ್ಶಿಯಾಗಿ ಹಾಗೂ ತಮಿಳುನಾಡು–ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೂರಜ್ ಹೆಗ್ಡೆ ಸಂಘಟನೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದ ಅವರು ಸಮರ್ಥ ಸಂಘಟಕರಾಗಿ ಗುರುತಿಸಿಕೊಂಡಿದ್ದರು ಎಂದು ಸಚಿವರು ಹೇಳಿದ್ದಾರೆ.

“ಸೂರಜ್ ಹೆಗ್ಡೆ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಒಬ್ಬ ಸಮರ್ಥ, ಕ್ರಿಯಾಶೀಲ ಮತ್ತು ಭರವಸೆಯ ಕಾರ್ಯಕರ್ತನನ್ನು ಕಳೆದುಕೊಂಡಿದೆ” ಎಂದು ಡಾ. ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಸೂರಜ್ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರು, ಸ್ನೇಹಿತರು, ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

Author

Anu News

Follow Me
Other Articles
Previous

ಸೂರಜ್ ಹೆಗ್ಡೆ ನಿಧನ: ಕಾಂಗ್ರೆಸ್‌ಗೆ ಅಪಾರ ನಷ್ಟ ಎಂದ ಖರ್ಗೆ

Next

ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಮುಂದಿನ ಎರಡು ದಿನ ರೆಡ್ ಅಲರ್ಟ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್
    • HD Kumaraswamy opposes CWRC directive; state to move CWMA over Cauvery release
    • ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
    • SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ
    • Bill making insult to ‘Vande Mataram’ a criminal offence passed in Rajya Sabha
    Copyright 2026 — ANU News. All rights reserved. Blogsy WordPress Theme