Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?; ಸಿ.ಟಿ.ರವಿ ಪ್ರಶ್ನೆ

By ANU News
July 11, 2026 1 Min Read
0

ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ ಕರ್ನಾಟಕ ಹೊಸ ಆಶ್ರಯ ತಾಣವಾಗುತ್ತಿದೆಯೇ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಕುರಿತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರಕ್ಕೆ ಬಂದ ನಂತರ ಅಕ್ರಮ ಬಾಂಗ್ಲಾದೇಶಿ ವಲಸೆಯನ್ನು ಬಹುತೇಕ ನಿಯಂತ್ರಿಸಲಾಗಿದೆ ಎಂದು ಹೇಳಿರುವ ಅವರು, ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ಪಕ್ಷಗಳು ಇಂತಹ ಅಕ್ರಮ ವಲಸಿಗರನ್ನು ಮತಬ್ಯಾಂಕ್ ರಾಜಕೀಯಕ್ಕಾಗಿ ಬಳಸಿಕೊಂಡಿವೆ ಎಂದು ಆರೋಪಿಸಿದ್ದಾರೆ.

ಕರ್ನಾಟಕವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರ ಆಶ್ರಯ ತಾಣವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎಂದು ಪ್ರಶ್ನಿಸಿರುವ ಸಿ.ಟಿ. ರವಿ, ಮಂಡ್ಯದಲ್ಲಿ ಸಾವಿರಾರು ಅಕ್ರಮ ವಲಸಿಗರು ರೈಲ್ವೆ ನಿಲ್ದಾಣಕ್ಕೆ ಹೇಗೆ ಬಂದಿಳಿದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕವು ಕನ್ನಡಿಗರು ಮತ್ತು ಭಾರತೀಯರ ರಾಜ್ಯವಾಗಿದ್ದು, ಅಕ್ರಮ ನುಸುಳುಕೋರರದ್ದಲ್ಲ ಎಂದು ಅವರು ಹೇಳಿದ್ದಾರೆ. ಈಗಾಗಲೇ ರಾಜ್ಯದಲ್ಲಿ ದರೋಡೆ, ಅತ್ಯಾಚಾರ ಮತ್ತು ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಕ್ರಮ ವಲಸಿಗರ ಪ್ರವೇಶ ಕಾನೂನು ಸುವ್ಯವಸ್ಥೆಗೆ ಮತ್ತಷ್ಟು ಸವಾಲಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಲಸಿಗರು ರಾಜ್ಯಕ್ಕೆ ಹೇಗೆ ಬಂದರು ಮತ್ತು ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಸರ್ಕಾರ ತಕ್ಷಣ ತನಿಖೆ ನಡೆಸಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿರುವ ಅವರು, ಅಕ್ರಮ ವಲಸಿಗರನ್ನು ಮತಬ್ಯಾಂಕ್ ರಾಜಕೀಯಕ್ಕಾಗಿ ಸಕ್ರಮಗೊಳಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?

ಈಶಾನ್ಯ ಭಾರತದಲ್ಲಿ ಬಿಜೆಪಿ ಸರ್ಕಾರಗಳು ಬಂದ ನಂತರ, ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ಅಲ್ಲಿ ನೆಲೆಸುವುದು ಬಹುತೇಕ ಅಸಾಧ್ಯವಾಗಿದೆ. ಇಂದು ಬಾಂಗ್ಲಾದೇಶದೊಡನೆ ಗಡಿ ಹಂಚಿಕೊಳ್ಳುವ ರಾಜ್ಯಗಳಲ್ಲಿ ಅಕ್ರಮ ನುಸುಳುವಿಕೆಯನ್ನು ಬಹುತೇಕ ತಡೆಗಟ್ಟಲಾಗಿದೆ. ಆದರೆ, ಕಾಂಗ್ರೆಸ್… pic.twitter.com/TCbP3PrHEI

— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) July 10, 2026

Author

ANU News

Follow Me
Other Articles
Previous

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ

Next

C.T. Ravi Questions Illegal Bangladeshi Immigration into Karnataka, Targets State Government

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ
    • Parishrama Adalat in Hyderabad Resolves 65 MSE Payment Disputes Worth ₹8.29 Crore
    • No cause for panic: Government monitors seasonal influenza trends
    • South Asian gut microbiome found to be unique; study points to need for tailored lifestyle disease treatment
    • ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ
    Copyright 2026 — ANU News. All rights reserved. Blogsy WordPress Theme