Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ವಿದೇಶ

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

By ANU News
July 13, 2026 1 Min Read
0

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳ ನಡುವೆ ಸಿಲುಕಿದವರು ಆತಂಕದಿಂದ ಹೊರಬರಲು ಯತ್ನಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಥಾಯ್ಲೆಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಾಕುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವರ ಮೃತದೇಹಗಳು ಪಬ್‌ನ ಹಿಂಭಾಗದ ಶೌಚಾಲಯಗಳ ಬಳಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಗೀತಗಾರರೊಬ್ಬರ ಪ್ರಕಾರ, ವೇದಿಕೆ ಸಮೀಪದ ವಿದ್ಯುತ್ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡು, ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡು ಭಾರೀ ಸ್ಫೋಟ ಸಂಭವಿಸಿತು. ಕೆಲವೇ ಕ್ಷಣಗಳಲ್ಲಿ ಪಬ್ ದಟ್ಟ ಹೊಗೆಯಿಂದ ಆವರಿಸಿದ್ದರಿಂದ ಜನರು ಹೊರಬರಲು ಸಾಧ್ಯವಾಗಲಿಲ್ಲ.

ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಅವರ ಮಾಹಿತಿ ಪ್ರಕಾರ, 63 ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ 22 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಗ್ನಿಶಾಮಕ ಸಿಬ್ಬಂದಿ ಸುಮಾರು 30 ನಿಮಿಷಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳದಲ್ಲಿ ಮೃತರು ಮತ್ತು ನಾಪತ್ತೆಯಾದವರ ಕುಟುಂಬಸ್ಥರಿಗಾಗಿ ವಿಶೇಷ ಸಹಾಯ ಮತ್ತು ನೋಂದಣಿ ಕೇಂದ್ರವನ್ನು ತೆರೆಯಲಾಗಿದೆ.

Author

ANU News

Follow Me
Other Articles
Previous

‘Maa Inti Bangaram’; Samantha Says Success Silences Doubts Over Women-Centric Films

Next

27 Killed, Over 63 Injured in Massive Bangkok Pub Fire

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Annabrahma Chaturmasya’ in Gokarna: Mind, ‘ojas’ vital to keep body functioning, says Raghaveshwara Sri
    • ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ
    • ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ
    • Golden Paduka Puja takes centre stage at Annabrahma Chaturmasya in Gokarna
    • ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ
    Copyright 2026 — ANU News. All rights reserved. Blogsy WordPress Theme