Skip to content
ANU News
ANU News
  • Home
  • Home
ANU News
ANU News
  • Home
  • Home
ವಿದೇಶ

ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

By ANU News
July 14, 2026 1 Min Read
0

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 30 ಭಾರತೀಯ ನಾವಿಕರ ಪೈಕಿ ಒಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಎಂಟಿ ಅಲ್ ಬಹಿಯಾ ಹಡಗಿನಲ್ಲಿ 12 ಭಾರತೀಯರು ಇದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂಟಿ ಮೊಂಬಾಸಾ ಹಡಗಿನಲ್ಲಿ ಇದ್ದ 18 ಭಾರತೀಯರಲ್ಲಿ 9 ಮಂದಿ ಗಾಯಗೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಈ ದಾಳಿಗೆ ಸಂಬಂಧಿಸಿ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಉಪ ಮುಖ್ಯಸ್ಥರನ್ನು ವಿದೇಶಾಂಗ ಸಚಿವಾಲಯ ಕರೆಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಹಾರ್ಮುಜ್ ಜಲಸಂಧಿಯಂತಹ ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಹಾಗೂ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗುವ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಹಡಗುಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.

Author

ANU News

Follow Me
Other Articles
Previous

SC declines to stay Bhojshala verdict, allows Friday prayers at alternate site

Next

India condemns Strait of Hormuz attack; vows to protect freedom of navigation

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • BJP accuses Karnataka government of targeting farmers in Bidadi Township row
    • ಬಿಡದಿ ಟೌನ್‌ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?
    • Deve Gowda seeks withdrawal of Bidadi Township project, warns of satyagraha
    • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ
    • Fake Facebook account in DCP’s name used for online fraud; FIR registered
    Copyright 2026 — ANU News. All rights reserved. Blogsy WordPress Theme