Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

By ANU News
July 30, 2026 1 Min Read
0

ನವದೆಹಲಿ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಎತ್ತಿಹಿಡಿದಿರುವ ಬೆನ್ನಲ್ಲೇ, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಗಳು ಹೆಚ್ಚಾಗಿವೆ.

ಗುರುವಾರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದ ಕರ್ನಾಟಕದ ಸಂಸದರ ನಿಯೋಗವು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದ ನೀರಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಿತು.

ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಲ್ಹಾದ್ ಜೋಶಿ, ಈ ವರ್ಷ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಕುಸಿದಿದ್ದು, ಕುಡಿಯುವ ನೀರಿನ ಸಂಕಷ್ಟ ಮತ್ತು ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ಸಚಿವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ಇದೇ ವೇಳೆ, CWMA ಆದೇಶದ ವಿರುದ್ಧ ಮಂಡ್ಯ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಆರಂಭವಾಗಿದ್ದು, ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಎಚ್ಚರಿಕೆ ನೀಡಿವೆ.

ಸಂಸದರ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ. ಗದ್ದಿಗೌಡರ, ಪಿ.ಸಿ. ಮೋಹನ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದ್ದರು.

ನವದೆಹಲಿಯಲ್ಲಿ ಇಂದು ರಾಜ್ಯದ ಸಂಸದರ ನಿಯೋಗದೊಂದಿಗೆ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ.ಆರ್. ಪಾಟೀಲ್ @CRPaatil ಅವರನ್ನು ಭೇಟಿ ಮಾಡಿ ರಾಜ್ಯದ ಜಲ, ನೀರಾವರಿ ಮತ್ತು ಕುಡಿಯುವ ನೀರಿನ ಕುರಿತು ಚರ್ಚಿಸಲಾಯಿತು.

ರಾಜ್ಯದಲ್ಲಿ ಈ ವರ್ಷ ತೀವ್ರ ಮಳೆ ಕೊರತೆಯಾಗಿದ್ದು, ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಕುಡಿಯುವ… pic.twitter.com/j2RDO2RUa2

— Pralhad Joshi (@JoshiPralhad) July 30, 2026

Author

ANU News

Follow Me
Other Articles
Previous

Drinking water is Karnataka’s priority, don’t politicise Cauvery issue: Chaluvarayaswamy

Next

Cauvery row: Karnataka delegation meets Jal Shakti Minister seeking relief

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ
    • Cauvery row: Karnataka delegation meets Jal Shakti Minister seeking relief
    • ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ
    • Drinking water is Karnataka’s priority, don’t politicise Cauvery issue: Chaluvarayaswamy
    • ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ
    Copyright 2026 — ANU News. All rights reserved. Blogsy WordPress Theme