Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

By ANU News
August 3, 2026 1 Min Read
0

ಬೆಂಗಳೂರು: ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿನ ಗೊಂದಲದಿಂದ ಅನ್ಯಾಯಕ್ಕೆ ಒಳಗಾದ ಪ್ರತಿಯೊಬ್ಬ ಅರ್ಹ ಉದ್ಯೋಗಾಕಾಂಕ್ಷಿಗೂ ನ್ಯಾಯ ದೊರೆಯುವಂತೆ ರಾಜ್ಯ ಸರ್ಕಾರ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ **’ಎಕ್ಸ್’**ನಲ್ಲಿ ಪ್ರತಿಕ್ರಿಯಿಸಿರುವ ಅವರು, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ OMR ಶೀಟ್ ಗೊಂದಲ ಹಾಗೂ ಅಭ್ಯರ್ಥಿಗಳ ಪ್ರತಿಭಟನೆಗಳು ರಾಜ್ಯ ಸರ್ಕಾರದ ಮತ್ತೊಂದು ಆಡಳಿತಾತ್ಮಕ ವೈಫಲ್ಯವನ್ನು ಬಯಲಿಗೆಳೆದಿವೆ ಎಂದು ಟೀಕಿಸಿದ್ದಾರೆ.

ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಸಾವಿರಾರು ಯುವಕ-ಯುವತಿಯರು ವರ್ಷಗಳ ಕಾಲ ಶ್ರಮಪಟ್ಟು, ಪೋಷಕರು ಕಷ್ಟಪಟ್ಟು ಸಂಪಾದಿಸಿದ ಹಣದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿರುತ್ತಾರೆ. ಆದರೆ ಪರೀಕ್ಷಾ ಕೇಂದ್ರಗಳಲ್ಲಿ ಉಂಟಾದ OMR ಶೀಟ್ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಅಭ್ಯರ್ಥಿಗಳ ಭವಿಷ್ಯವನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳ ಜೀವನದ ಮಹತ್ವದ ಹಂತದಲ್ಲಿ ಕಾಂಗ್ರೆಸ್ ಸರ್ಕಾರದ ಈ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ಖಂಡನೀಯ ಎಂದು ವಿಜಯೇಂದ್ರ ಹೇಳಿದ್ದಾರೆ.

ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರಕ್ಕೆ ಯುವಕರ ಭವಿಷ್ಯಕ್ಕಿಂತ ಬೇರೆ ವಿಷಯಗಳೇ ಮುಖ್ಯವಾಗಿರುವಂತಿದೆ. ಒಂದು ನೇಮಕಾತಿ ಪರೀಕ್ಷೆಯನ್ನೂ ಪಾರದರ್ಶಕವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸಾಧ್ಯವಾಗದಷ್ಟು ಸರ್ಕಾರ ಅಸಮರ್ಥವಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ಮಧ್ಯಪ್ರವೇಶಿಸಿ, ವಿಜಯಪುರ ಪರೀಕ್ಷಾ ಕೇಂದ್ರದಲ್ಲಿ ಉಂಟಾದ ಗೊಂದಲಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ಪರೀಕ್ಷಾ ಅವ್ಯವಸ್ಥೆಯಿಂದ ಅನ್ಯಾಯಕ್ಕೆ ಒಳಗಾದ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವಂತೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

Author

ANU News

Follow Me
Other Articles
Previous

Heavy Rain Likely Across Karnataka for Three More Days; Red Alert in Malnad

Next

‘Youth’s future cannot be compromised’: Vijayendra urges Karnataka govt to act on police exam chaos

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
    • ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
    • Poll strategist-turned-politician Prashant Kishor enters Bihar Assembly with big Bankipura win
    • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್
    • Karnataka cabinet expansion triggers Congress revolt; MLAs face pressure to resign
    Copyright 2026 — ANU News. All rights reserved. Blogsy WordPress Theme