Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಕೇರಳದಲ್ಲಿ ಕೈ ಮೇಲುಗೈ, ಆಡಳಿತಾರೂಢ ಎಲ್​ಡಿಎಫ್’ಗೆ ಸೋಲು; ಅಂತಿಮ ಬಲಾಬಲ ಹೀಗಿದೆ

By ANU News
May 5, 2026 1 Min Read
0

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್)ಗೆ ಭಾರೀ ಹಿನ್ನಡೆ ಎದುರಾಗಿದೆ. ಎಲ್‌ಡಿಎಫ್ ಸರ್ಕಾರದ 21 ಸಚಿವರು ಸೋಲುಂಡಿರುವುದು ಈ ಫಲಿತಾಂಶದ ಪ್ರಮುಖ ಅಂಶವಾಗಿದೆ.

ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ನೀಡಿರುವ ಯುಡಿಎಫ್, 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳುವ ದಿಸೆಯಲ್ಲಿ ಮುನ್ನಡೆ ಸಾಧಿಸಿದೆ. ಈ ಫಲಿತಾಂಶದೊಂದಿಗೆ ದೇಶದಲ್ಲಿ ಅಧಿಕಾರದಲ್ಲಿದ್ದ ಏಕೈಕ ಕಮ್ಯುನಿಷ್ಟ್ ಸರ್ಕಾರ ಪತನದ ಅಂಚಿಗೆ ತಲುಪಿದೆ.

2001ರ ಚುನಾವಣೆಯ ನಂತರ ಯುಡಿಎಫ್‌ಗೆ ಇದು ಅತ್ಯುತ್ತಮ ಫಲಿತಾಂಶವಾಗಿದ್ದು, ಆ ಸಂದರ್ಭದಲ್ಲಿ 99 ಸ್ಥಾನಗಳನ್ನು ಗೆದ್ದಿದ್ದ ಮೈತ್ರಿ ಈ ಬಾರಿ ಅದನ್ನು ಮೀರಿ ದಾಖಲೆ ನಿರ್ಮಿಸಿದೆ. ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ನೇತೃತ್ವದಲ್ಲಿ ನಡೆದ ಪ್ರಚಾರ ಫಲ ನೀಡಿದ್ದು, ರಾಜ್ಯದಾದ್ಯಂತ ಯುಡಿಎಫ್ ಅಲೆ ಸ್ಪಷ್ಟವಾಗಿ ಗೋಚರಿಸಿದೆ.

ಕಾಂಗ್ರೆಸ್ ನೇತೃತ್ವದ ಈ ಮೈತ್ರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಏಕಾಂಗಿಯಾಗಿ 63 ಸ್ಥಾನಗಳನ್ನು ಗೆದ್ದಿದ್ದು, ಒಟ್ಟಾರೆ ಯುಡಿಎಫ್ 102 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಸಾಧಿಸಿದೆ. ಇತ್ತ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಕೇವಲ 35 ಸ್ಥಾನಗಳಿಗೆ ಸೀಮಿತವಾಗಿದ್ದು, ಅನೇಕ ಪರಂಪರೆಯ ಬಲಿಷ್ಠ ಕ್ಷೇತ್ರಗಳಲ್ಲಿಯೂ ಹಿನ್ನಡೆ ಅನುಭವಿಸಿದೆ.

ಪಕ್ಷಗಳ ಅಂತಿಮ ಬಲಾಬಲ ಹೀಗಿದೆ:

  • ಒಟ್ಟು ಸ್ಥಾನಗಳು: 140
  • ಯುಡಿಎಫ್ : 102 ಸ್ಥಾನಗಳು
  • ಎಲ್​ಡಿಎಫ್: 35 ಸ್ಥಾನಗಳು
  • ಎನ್​ಡಿಎ : 03 ಸ್ಥಾನಗಳು
Author

ANU News

Follow Me
Other Articles
Previous

Modi–Shah Strategy Sweeps Bengal; Mamata Banerjee Suffers Major Setback

Next

ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme