Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜಾರಕಿಹೊಳಿ ನಿವಾಸ ಮೇಲೆ EDಯಿಂದ ರಾಜಕೀಯ ಪ್ರೇರಿತ ದಾಳಿ ಎಂದ ಕಾಂಗ್ರೆಸ್; ಇದು ಕಾನೂನು ಪ್ರಕ್ರಿಯೆಯಷ್ಟೇ ಎಂದ ಶೆಟ್ಟರ್

By ANU News
September 9, 2026 2 Min Read
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರಿಗೆ ಸಂಬಂಧಿಸಿದ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ.

ದಾಳಿಯ ಹಿಂದೆ ಬಿಜೆಪಿಯ ದುರುದ್ದೇಶವಿದ್ದು, ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

Satish Jarkiholi

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇಡಿ ಅಸ್ತ್ರ ಬಳಸಲಾಗುತ್ತಿದೆ ಎಂದು ದೂರಿದರು. ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ ಅವರು, ತನಿಖಾ ಸಂಸ್ಥೆಗಳು ಸುಳ್ಳು ಕಥೆ ಮತ್ತು ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು.

“ED raid against Satish Jarkiholi politically motivated; BJP may target other ministers as well.”

– CM DK Shivakumar pic.twitter.com/kQ9p8UvkbI

— News Arena India (@NewsArenaIndia) September 9, 2026

‘ದಾಳಿಯಿಂದ ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ’

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ದಾಳಿಯನ್ನು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಇಂತಹ ದಾಳಿಗಳ ಮೂಲಕ ರಾಜ್ಯ ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ರಾಜಕೀಯವಾಗಿ ದುರ್ಬಲವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳ ಮೂಲಕ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಟೀಕಿಸಿದರು.

ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಕೂಡ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಪಕ್ಷ ನಾಯಕರನ್ನು ಬೆದರಿಸಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

‘ED ಸ್ವಾಯತ್ತ ಸಂಸ್ಥೆ’

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಇಡಿ ಮತ್ತು ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿದ್ದು, ಲಭ್ಯವಾಗುವ ಮಾಹಿತಿಯ ಆಧಾರದಲ್ಲಿ ತನಿಖೆ ನಡೆಸುತ್ತವೆ ಎಂದರು.

ಸತೀಶ್‌ ಜಾರಕಿಹೊಳಿ ವಿರುದ್ಧದ ದಾಳಿ ರಾಜಕೀಯ ಪ್ರೇರಿತವಲ್ಲ. ತನಿಖಾ ಸಂಸ್ಥೆಗಳು ತಮ್ಮ ಕಾನೂನು ಪ್ರಕ್ರಿಯೆಯಂತೆ ಕಾರ್ಯನಿರ್ವಹಿಸುತ್ತಿವೆ. ದಾಳಿ ನಡೆದ ತಕ್ಷಣವೇ ಅದನ್ನು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ಆರೋಪಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

Karnataka:

“ED raid against Minister Satish Jarkiholi is not politically motivated.”

– BJP MP Jagadish Shettar pic.twitter.com/NzqPqCG9Ss

— News Arena India (@NewsArenaIndia) September 9, 2026

ದಾಳಿಗೆ ಸಂಬಂಧಿಸಿದಂತೆ ಇಡಿ ಅಧಿಕೃತವಾಗಿ ಬಹಿರಂಗಪಡಿಸುವ ವಿವರಗಳ ಬಳಿಕ ಪ್ರಕರಣದ ಮುಂದಿನ ಬೆಳವಣಿಗೆ ಸ್ಪಷ್ಟವಾಗಲಿದೆ.

Author

ANU News

Follow Me
Other Articles
Previous

Boost ethanol production to raise farmers’ income, cut pollution: Kuruburu Shanthakumar

Next

ED raid on Satish Jarkiholi: Congress cries political vendetta, BJP calls it legal process

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Prashanth Neel-presented horror film ‘418’ gets A certificate after CBFC raises concerns over scary scenes
    • Kareena Kapoor flags Bollywood’s lack of originality, says hit formulas won’t make great films
    • ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್
    • ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ
    • SC rejects Abu Salem’s plea for early release, says 25 years complete in 2030
    Copyright 2026 — ANU News. All rights reserved. Blogsy WordPress Theme