Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸೆ.19ಕ್ಕೆ ತೀರ್ಥಹಳ್ಳಿ, ಬಾಳೆಹೊನ್ನೂರಿಗೆ ಸಿಎಂ ಡಿಕೆಶಿ; ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿ ಹೋರಾಟಗಾರರೊಂದಿಗೆ ಸಂವಾದ

By ANU News
September 14, 2026 1 Min Read
0

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಭಾಗದಲ್ಲಿ ರೈತರ ಹೋರಾಟ ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ.19ರಂದು ತೀರ್ಥಹಳ್ಳಿ ಹಾಗೂ ಬಾಳೆಹೊನ್ನೂರಿಗೆ ಭೇಟಿ ನೀಡಲಿದ್ದು, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಈಗಾಗಲೇ ಮಲೆನಾಡಿನ ವಿವಿಧ ತಾಲೂಕುಗಳಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ, ಪಾದಯಾತ್ರೆ ಸೇರಿದಂತೆ ಹಲವು ಹೋರಾಟಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭೇಟಿ ಮಹತ್ವ ಪಡೆದುಕೊಂಡಿದೆ.

ಸೆ.19ರಂದು ಮಂಗಳೂರಿನಿಂದ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ 10ರ ಸುಮಾರಿಗೆ ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸುವ ನಿರೀಕ್ಷೆಯಿದೆ. ಬಳಿಕ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಹಾಗೂ ಸ್ಥಳೀಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿ ಜಾರಿಯಿಂದ ಮಲೆನಾಡಿನ ರೈತರು ಹಾಗೂ ಅರಣ್ಯವಾಸಿಗಳಿಗೆ ಎದುರಾಗಬಹುದಾದ ಸಮಸ್ಯೆಗಳು, ಪರಿಸರ ಸಂರಕ್ಷಣೆ ಮತ್ತು ಜನಜೀವನದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆಯುವ ಸಾಧ್ಯತೆಯಿದೆ.

ಮಧ್ಯಾಹ್ನ 1ರ ಸುಮಾರಿಗೆ ಮುಖ್ಯಮಂತ್ರಿ ಬಾಳೆಹೊನ್ನೂರಿಗೆ ತೆರಳಲಿದ್ದು, ಶ್ರೀ ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ನಲ್ಲಿ ಇಳಿದು, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಸೆ.19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಾ. ಆರ್.ಎಂ. ಮಂಜುನಾಥ್ ಗೌಡ ನೇತೃತ್ವದಲ್ಲಿ ಭರ್ಜರಿ ಸ್ವಾಗತ ಹಾಗೂ ಅದ್ದೂರಿ ಕಾರ್ಯಕ್ರಮ ಆಯೋಜಿಸುವ ಸಾಧ್ಯತೆಯಿದೆ.

ಕಾರ್ಯಕ್ರಮದ ಅಂತಿಮ ರೂಪುರೇಷೆ ಇನ್ನಷ್ಟೇ ನಿಗದಿಯಾಗಬೇಕಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ಮುಖ್ಯಮಂತ್ರಿ ರಾಮೇಶ್ವರ ದೇವಸ್ಥಾನಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ

Author

ANU News

Follow Me
Other Articles
Previous

ಆಗಸ್ಟ್‌ನಲ್ಲಿ ರೈಲ್ವೆ ಇಲಾಖೆ ಸಾಧನೆ; ಸರಕು ಸಾಗಣೆ ಶೇ.5.4 ಏರಿಕೆ

Next

DK Shivakumar to visit Thirthahalli, Balehonnur on Sept 19 amid Kasturirangan report protests

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • 1033 ಹೆದ್ದಾರಿ ಸಹಾಯವಾಣಿ ಉನ್ನತೀಕರಣ: AI, ರಿಯಲ್‌ಟೈಮ್ ಟ್ರ್ಯಾಕಿಂಗ್
    • NHAI to upgrade 1033 helpline with AI, real-time tracking
    • PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ
    • New PNG incentive scheme aims to make piped cooking gas cheaper, expand household connections
    • ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ
    Copyright 2026 — ANU News. All rights reserved. Blogsy WordPress Theme