ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ
ನವದೆಹಲಿ: ದೆಹಲಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್, ಜಾರ್ಖಂಡ್ ಮತ್ತು ಕರ್ನಾಟಕ ಹೈಕೋರ್ಟ್ಗಳಿಗೆ ಒಟ್ಟು 14 ನ್ಯಾಯಾಂಗ ಅಧಿಕಾರಿಗಳನ್ನು ನ್ಯಾಯಾಧೀಶರು ಹಾಗೂ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಾತಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿವೇದಿತಾ ಅನಿಲ್ ಶರ್ಮಾ ಮತ್ತು ನಿಶಾ ಸಹಾಯ್ ಸಕ್ಸೇನಾ ಅವರನ್ನು ದೆಹಲಿ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಸಂಜಯ್ ಶರ್ಮಾ, ಭರತ್ ಪರಾಶರ್, ಡಾ. ಅದಿತಿ ಚೌಧರಿ, ದಿನೇಶ್ ಭಟ್ ಮತ್ತು ಅರುಣ್ ಭಾರದ್ವಾಜ್ ಅವರನ್ನು ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಯಶ್ ಪಾಲ್ ಬೌರ್ನಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಜಾರ್ಖಂಡ್ ಹೈಕೋರ್ಟ್ಗೆ ಮನೋಜ್ ಪ್ರಸಾದ್, ಅಖಿಲ್ ಕುಮಾರ್ ಮತ್ತು ರಾಮ್ ಶರ್ಮಾ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ಹೈಕೋರ್ಟ್ಗೆ ಉಷಾರಾಣಿ, ಕೆ.ಎಸ್. ಭರತ್ ಕುಮಾರ್ ಮತ್ತು ನೆರಲೆ ವಿ. ಭವಾನಿ ಅವರನ್ನು ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಹೈಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥ ಹಾಗೂ ಸಮಯೋಚಿತ ನ್ಯಾಯದಾನಕ್ಕೆ ನ್ಯಾಯಾಂಗ ಪೀಠಗಳನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ ಈ ನೇಮಕಾತಿಗಳು ನಡೆದಿವೆ. ನೇಮಕಾತಿಗಳ ಜಾರಿಗೆ ಬರುವ ದಿನಾಂಕ ಹಾಗೂ ಅವಧಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ಹೆಚ್ಚಿನ ವಿವರ ನೀಡಲಾಗಿಲ್ಲ.