Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶಸಿನಿಮಾ

AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

By ANU News
May 24, 2026 1 Min Read
0

ಬೆಂಗಳೂರು: ತಮ್ಮ ಬಗ್ಗೆ AI ತಂತ್ರಜ್ಞಾನ ಬಳಸಿ ನಕಲಿ ಬಿಕಿನಿ ಫೋಟೋಗಳು ಹಾಗೂ ವೀಡಿಯೊಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವವರ ವಿರುದ್ಧ ನಟಿ ರುಕ್ಮಿಣಿ ವಸಂತ್ (Rukmini Vasanth) ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಂತಾರ ಅಧ್ಯಾಯ-2” ಚಿತ್ರದ ಮೂಲಕ ಗಮನ ಸೆಳೆದಿರುವ ರುಕ್ಮಿಣಿ ವಸಂತ್, ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ X ನಲ್ಲಿ ಪ್ರತಿಕ್ರಿಯಿಸಿರುವ ಅವರು, “ನನ್ನದು ಎಂದು ಹೇಳಿಕೊಂಡು ಕೆಲವು AI-ರಚಿತ ಚಿತ್ರಗಳು ಪ್ರಸಾರವಾಗುತ್ತಿವೆ. ಅವು ಸಂಪೂರ್ಣ ನಕಲಿ ಮತ್ತು ಕೃತಕ. ಇಂತಹ ವಿಷಯ ಸೃಷ್ಟಿಸಿ ಹಂಚುವುದು ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ನಟಿ, ನಕಲಿ ಫೋಟೋ ಮತ್ತು ವೀಡಿಯೊಗಳನ್ನು ಸೃಷ್ಟಿಸಿ ಹರಡುತ್ತಿರುವವರ ವಿರುದ್ಧ ಕಾನೂನು ಹಾಗೂ ಸೈಬರ್ ಅಪರಾಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

“ನಾನು ಮತ್ತು ನನ್ನ ತಂಡ ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಕೆಲವು AI-ರಚಿತ ಚಿತ್ರಗಳನ್ನು ಗಮನಿಸಿದ್ದೇವೆ. ಅವು ಸಂಪೂರ್ಣ ಸುಳ್ಳು. ಇಂತಹ ಕೃತಕ ವಿಷಯಗಳನ್ನು ಹಂಚಿಕೊಳ್ಳುವುದು ಬೇಜವಾಬ್ದಾರಿತನ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಇಂತಹ ನಕಲಿ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ರುಕ್ಮಿಣಿ ವಸಂತ್ ಮನವಿ ಮಾಡಿದ್ದಾರೆ.

From the desk of #RukminiVasanth pic.twitter.com/fwcSGL4OBd

— Rukmini Vasanth (@RukminiVasantFP) May 23, 2026

Author

ANU News

Follow Me
Other Articles
Previous

ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

Next

ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
    • BJP Alleges Irregularities in Voter List Revision, Targets Congress Over SIR Process
    • ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
    • Eight Killed in Separate Accidents in Andhra Pradesh and Telangana
    • ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
    Copyright 2026 — ANU News. All rights reserved. Blogsy WordPress Theme