Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

By ANU News
July 15, 2026 1 Min Read
0

ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (PRC) ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ನಿಯೋಗದಲ್ಲಿ ಭಾಗವಹಿಸಿದ್ದರು.

ರಾಜ್ಯ ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ಶಾಶ್ವತ ನಿವಾಸಿಗಳನ್ನಾಗಿ ಮಾಡಿ ಮತದಾರರನ್ನಾಗಿಸುವ ಹುನ್ನಾರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಜ್ಯದಲ್ಲಿ 20ರಿಂದ 30 ಲಕ್ಷ ಅಕ್ರಮ ಬಾಂಗ್ಲಾದೇಶೀಯರಿರುವ ಮಾಹಿತಿ ಇದ್ದು, ಅವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್, ಮನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಸಿಗಲಿದೆ ಎಂದು ನಿಯೋಗ ರಾಜ್ಯಪಾಲರ ಗಮನಕ್ಕೆ ತಂದಿದೆ.

ಇದರಿಂದ ಕಾಂಗ್ರೆಸ್‌ಗೆ ಮತ ಹಾಕುವವರನ್ನು ಶಾಶ್ವತ ನಾಗರಿಕರನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ದೂರಿದೆ.

ಪೌರತ್ವ ಮತ್ತು ವಿದೇಶಿಯರ ಸಂಬಂಧಿತ ವಿಷಯಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದ್ದು, ರಾಜ್ಯ ಸರ್ಕಾರಕ್ಕೆ ಇಂತಹ ಪ್ರಮಾಣಪತ್ರ ನೀಡುವ ಅಧಿಕಾರವಿಲ್ಲ ಎಂದು ಬಿಜೆಪಿ ನಾಯಕರು ವಾದಿಸಿದ್ದಾರೆ.

ಈ ನಿರ್ಧಾರ ದೇಶದ ಭದ್ರತೆಗೆ ಅಪಾಯಕಾರಿಯಾಗಬಹುದು ಎಂದು ಎಚ್ಚರಿಸಿರುವ ಬಿಜೆಪಿ, ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳ ಉದಾಹರಣೆ ನೀಡಿ, ಅಕ್ರಮ ವಲಸಿಗರು ಭವಿಷ್ಯದಲ್ಲಿ ಭದ್ರತಾ ಸವಾಲು ಸೃಷ್ಟಿಸುವ ಸಾಧ್ಯತೆಯಿದೆ ಎಂದು ರಾಜ್ಯಪಾಲರಿಗೆ ತಿಳಿಸಿದೆ.

Author

ANU News

Follow Me
Other Articles
Previous

K’taka tells CWRC it cannot release Cauvery water to TN amid drought concerns

Next

BJP urges Karnataka Governor to revoke permanent residence certificate decision

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Commercial LPG cylinder price hiked by ₹9.50; domestic users get relief
    • ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್
    • Pakistan cricket team faces major overhaul after England Test series humiliation
    • ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಹಿನ್ನೆಲೆ; ಪಾಕ್ ಕ್ರಿಕೆಟ್ ತಂಡಕ್ಕೆ ಮೇಜರ್ ಸರ್ಜರಿ
    • ‘Unity abroad, division at home?’: B.K. Hariprasad questions Bhagwat’s remarks, RSS-BJP stance
    Copyright 2026 — ANU News. All rights reserved. Blogsy WordPress Theme