Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

‘ಭ್ರಷ್ಟಾಚಾರದ ಎಲ್ಲಾ ವಿಕೆಟ್‌ಗಳು ಬೀಳಬೇಕು’: ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಸಿ.ಟಿ. ರವಿ ರಣಕಹಳೆ

By ANU News
September 9, 2026 1 Min Read
0

ಬಳ್ಳಾರಿ: ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ, ರೈತರ ಸಮಸ್ಯೆಗಳು ಹಾಗೂ ಯುವಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ 9ನೇ ದಿನವಾದ ಬುಧವಾರ ಕುಡಿತಿನಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಈ ಸಂದರ್ಭದಲ್ಲಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವರಾದ ಸಿ.ಟಿ. ರವಿ, ಎಸ್‌. ಸುರೇಶ್‌ ಕುಮಾರ್‌, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಕ್ಯಾ. ಬ್ರಿಜೇಶ್‌ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್‌ ಗೌಡ, ನಂದೀಶ್‌ ರೆಡ್ಡಿ, ಉಪಾಧ್ಯಕ್ಷ ರಾಜು ಗೌಡ ಸೇರಿದಂತೆ ಹಲವು ನಾಯಕರು, ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

‘ಭ್ರಷ್ಟಾಚಾರದ ಎಲ್ಲಾ ವಿಕೆಟ್‌ಗಳು ಬೀಳಬೇಕು’

ಪಾದಯಾತ್ರೆಯಲ್ಲಿ ಮಾತನಾಡಿದ ಸಿ.ಟಿ. ರವಿ, ರೈತರು, ಯುವಕರು ಹಾಗೂ ದಲಿತರಿಗೆ ನ್ಯಾಯ ದೊರಕಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ಪ್ರಕರಣದಲ್ಲಿ ಕೇವಲ ಒಬ್ಬರ ರಾಜೀನಾಮೆ ಪಡೆದರೆ ಸಾಲದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. “ಭ್ರಷ್ಟಾಚಾರದ ಎಲ್ಲ ವಿಕೆಟ್‌ಗಳು ಬೀಳಬೇಕು” ಎಂದು ಅವರು ಆಗ್ರಹಿಸಿದರು.

ಗೃಹಲಕ್ಷ್ಮಿ ಬಾಕಿ ಹಣಕ್ಕೆ ಲೆಕ್ಕ ಕೇಳಿದ ಬಿಜೆಪಿ

ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣದ ಕುರಿತು ಸರ್ಕಾರ ಸ್ಪಷ್ಟ ಲೆಕ್ಕ ನೀಡಬೇಕು ಎಂದು ಸಿ.ಟಿ. ರವಿ ಒತ್ತಾಯಿಸಿದರು. ಕೆಪಿಎಸ್‌ಸಿ ನೇಮಕಾತಿಯಲ್ಲಿ ಯುವಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಬರ ಪರಿಹಾರ ನೀಡದೆ ರೈತರನ್ನು ನಿರ್ಲಕ್ಷಿಸಲಾಗಿದೆ ಎಂದರು.

ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿರುವುದು ಜನವಿರೋಧಿ ನೀತಿ ಎಂದು ಟೀಕಿಸಿದ ಅವರು, ಇಂತಹ ವಿಷಯಗಳ ವಿರುದ್ಧ ‘ಬಳ್ಳಾರಿ ಚಲೋ’ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

Author

ANU News

Follow Me
Other Articles
Previous

Expired products worth ₹3 crore seized from Bengaluru dark stores; strict action assured

Next

‘All wickets of corruption must fall’: C.T. Ravi targets Karnataka govt during Bellary Chalo

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Cauvery dispute: Karnataka govt to move Supreme Court against 6,000-cusecs release order
    • ಕಾವೇರಿ ವಿವಾದ: ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಕರ್ನಾಟಕ ತಯಾರಿ
    • AP Govt announces free electricity for Ganesh pandals during festival
    • ಆಂಧ್ರಪ್ರದೇಶದಲ್ಲಿ ಈ ಬಾರಿ ವಿಶೇಷ ಗಣೇಶ ಚತುರ್ಥಿ; ಗಣೇಶ ಮಂಟಪಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸರ್ಕಾರ
    • ಮೋದಿಯ 25 ವರ್ಷಗಳ ಸಾರ್ವಜನಿಕ ಸೇವೆ; ಸೆ.17ರಿಂದ ಅ.17ರವರೆಗೆ ಬಿಜೆಪಿಯಿಂದ ‘ಸೇವಾ ಸಂಕಲ್ಪ ಅಭಿಯಾನ’
    Copyright 2026 — ANU News. All rights reserved. Blogsy WordPress Theme