Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

By Anu News
June 16, 2026 1 Min Read
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯೋಜನೆಯನ್ನು ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಬಿಡದಿ ಟೌನ್‌ಶಿಪ್ ಯೋಜನೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ “ವ್ಯರ್ಥ ಯೋಜನೆ”ಯಾಗಿ ಪರಿಣಮಿಸಿದೆ ಎಂದು ಟೀಕಿಸಿದ್ದಾರೆ.

ಯೋಜನೆ ಜಾರಿಗೆ ಮುನ್ನ ರೈತರೊಂದಿಗೆ ಸಮಾಲೋಚನೆ ನಡೆಸಿಲ್ಲ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಗತ್ಯ ಪಾರದರ್ಶಕತೆ ಪಾಲಿಸಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಯಾವುದೇ ಭೂಸ್ವಾಧೀನಕ್ಕೂ ಮುನ್ನ ರೈತರಿಗೆ ಸ್ಪಷ್ಟ ಮಾಹಿತಿ, ಸಮಾಲೋಚನೆ ಮತ್ತು ನ್ಯಾಯಸಮ್ಮತ ಪ್ರಕ್ರಿಯೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಹೋರಾಟ ನಡೆಸುತ್ತಿರುವ ಜೆಡಿಎಸ್ ನಾಯಕರಿಗೆ ಬೆಂಬಲ ಘೋಷಿಸಿರುವ ತೇಜಸ್ವಿ ಸೂರ್ಯ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

“ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದು, ರೈತರ ಹಿತಾಸಕ್ತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಭರವಸೆ ನೀಡಿದ್ದೇನೆ” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ಸುತ್ತ ರಾಜಕೀಯ ವಾಕ್ಸಮರ ತೀವ್ರಗೊಳ್ಳುತ್ತಿದ್ದು, ರೈತರ ಪರ ಹೋರಾಟದ ವಿಷಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟ್ಟಿನ ನಿಲುವು ತಾಳುತ್ತಿರುವುದು ಗಮನಾರ್ಹವಾಗಿದೆ.

Chief Minister @DKShivakumar should stop taking PM Modi Ji’s name as a crutch of support to further his Bidadi Township project.

The Bidadi Township project has turned out to be Chief Minister DK Shivakumar’s vanity project. He has neither consulted farmers, nor taken them into… https://t.co/FpWjwRI02G pic.twitter.com/RPQNJGfZmh

— Tejasvi Surya (@Tejasvi_Surya) June 15, 2026

Author

Anu News

Follow Me
Other Articles
Previous

2-3 ದಿನ ರಾಜ್ಯದಲ್ಲಿ ವರುಣಾರ್ಭಟ ಸಾಧ್ಯತೆ; ಬೆಂಗಳೂರಿನಲ್ಲೂ ಮಳೆ ಸಂಭವ

Next

ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme