ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’
ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ “ಜಂಗಲ್ ಜರ್ನಿ 2026” ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ICYM ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್, CASK ಸೆಂಟಿನರಿ ಟ್ರಸ್ಟ್ ಹಾಗೂ MIJARC ಸಹಯೋಗದಲ್ಲಿ ಕಾಂತಾವರ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಕುಂದಾಪುರ ವಲಯದ ಮಾರ್ಗದರ್ಶನದಲ್ಲಿ ಅರಣ್ಯ ಬೀಟ್ ಅಧಿಕಾರಿ ಚಂದ್ರಶೇಖರ್ ಅವರು ಅರಣ್ಯ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮತ್ತು ಪರಿಸರ ರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ಕಾಂತಾವರ ಫಾರೆಸ್ಟ್ ಬೇಸ್ ಕ್ಯಾಂಪ್ನಲ್ಲಿ ಅರುಣ್ ಅವರು ಅರಣ್ಯದ ಮಹತ್ವ, ಪ್ರಸ್ತುತ ಅರಣ್ಯಗಳ ಸ್ಥಿತಿ ಹಾಗೂ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಒಟ್ಟು 67 ಯುವಜನರು ಭಾಗವಹಿಸಿ ಅರಣ್ಯ ಸಂರಕ್ಷಣೆ ಕುರಿತ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ವಂ. ರಿಚರ್ಡ್ ಡಿ’ಸೋಜಾ (ICYM ವಲಯ ನಿರ್ದೇಶಕರು), ವಂ. ಅಶ್ವಿನ್ ಕಾರ್ಡೋಜ (ಕರ್ನಾಟಕ ಪ್ರಾಂತೀಯ ICYM ಕಾರ್ಯದರ್ಶಿ), ರಿಷಲ್ ಡಿ’ಸೋಜಾ ಮತ್ತು ಜಾನ್ ವಿನ್ಸ್ಟೋನ್ (MIJARC ಕರ್ನಾಟಕ ಸಂಯೋಜಕರು), ಜೀತ್ ಮಿಲನ್ (ವನ ಚಾರಿಟಬಲ್ ಟ್ರಸ್ಟ್) ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪರಿಸರದ ಬಗ್ಗೆ ಯುವಜನರಲ್ಲಿ ಜವಾಬ್ದಾರಿಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.