Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

By ANU News
July 22, 2026 1 Min Read
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಆರಂಭದಲ್ಲಿ ಬುಧವಾರ ನೂತನ ಸಚಿವರ ಪ್ರಮಾಣವಚನ ನಡೆಯುವ ನಿರೀಕ್ಷೆ ಇದ್ದರೂ, ದೆಹಲಿಯಲ್ಲಿ ನೀಟ್ ಪ್ರತಿಭಟನೆ ಹಾಗೂ ಸಂಸತ್ ಅಧಿವೇಶನದ ಆರಂಭದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಕ್ರಿಯೆ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಕರ್ನಾಟಕ ಭವನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನದ ಬೆಳವಣಿಗೆಯಿಂದ ಹೈಕಮಾಂಡ್ ನಾಯಕರು ಇತರ ವಿಚಾರಗಳಲ್ಲಿ ನಿರತರಾಗಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸಂಪುಟ ವಿಸ್ತರಣೆಯನ್ನು ಮುಂದೂಡಲು ಇಷ್ಟವಿಲ್ಲದಿದ್ದರೂ, ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ಸಚಿವ ಸ್ಥಾನಗಳನ್ನು ಸಾಧ್ಯವಾದಷ್ಟು ಭರ್ತಿ ಮಾಡುವ ಉದ್ದೇಶವಿದ್ದು, ಹಿರಿಯರು ಹಾಗೂ ಕಿರಿಯರಿಗೆ ಸಮಾನ ಅವಕಾಶ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಸಂಪುಟ ಸೇರ್ಪಡೆ ಕುರಿತಂತೆ ವಿಜಯಾನಂದ ಕಾಶಪ್ಪನವರ್, ಬಸವರಾಜ ರಾಯರೆಡ್ಡಿ, ಅಶೋಕ್ ಪಟ್ಟಣ, ಲಕ್ಷ್ಮಣ ಸವದಿ, ಹಂಪನಗೌಡ ಬಾದರ್ಲಿ, ಯಶವಂತ್ ರಾಯಗೌಡ, ಅಪ್ಪಾಜಿ ನಾಡಗೌಡ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರುಗಳು ಚರ್ಚೆಯಲ್ಲಿವೆ. ಶಿವಲಿಂಗೇಗೌಡ, ಮಾಗಡಿ ಬಾಲಕೃಷ್ಣ, ಶರತ್ ಬಚ್ಚೇಗೌಡ, ಪ್ರಿಯಾ ಕೃಷ್ಣ ಹಾಗೂ ಗುಬ್ಬಿ ಶ್ರೀನಿವಾಸ್ (ವಾಸು) ಅವರ ಹೆಸರೂ ಪರಿಗಣನೆಯಲ್ಲಿದೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಜಮೀರ್ ಅಹ್ಮದ್ ಖಾನ್ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಲೀಂ ಅಹ್ಮದ್, ತನ್ವೀರ್ ಸೇಠ್, ರಿಜ್ವಾನ್ ಅರ್ಷದ್, ಖನೀಜ್ ಫಾತಿಮಾ ಅವರ ಹೆಸರುಗಳೂ ಚರ್ಚೆಯಲ್ಲಿದ್ದು, ಮಹಿಳಾ ಕೋಟಾದಡಿ ಎಂಎಲ್‌ಸಿ ಆರತಿ ಕೃಷ್ಣ ಹಾಗೂ ಉಮಾಶ್ರೀ ಅವರಿಗೆ ಅವಕಾಶ ಸಿಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

Author

ANU News

Follow Me
Other Articles
Previous

ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

Next

Karnataka cabinet expansion delayed again; high command yet to take final call

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Trump warns Iran as US continues strikes; Hormuz tensions raise global oil concerns
    • ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ
    • ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು
    • Centre reports 332 sewer, septic tank cleaning deaths; 193 FIRs filed in five years
    • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ
    Copyright 2026 — ANU News. All rights reserved. Blogsy WordPress Theme