Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ

By ANU News
September 12, 2026 1 Min Read
0

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯ ಶುದ್ಧೀಕರಣ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಣಿ ಸತೀಶ್, ವಿಧಾನಪರಿಷತ್ ಮಾಜಿ ಸದಸ್ಯೆ ಜಲಜಾ ನಾಯಕ್, ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಮುನೀರ್, ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ., ಪಶ್ಚಿಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಕ್ಷಿಣ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಹೆಚ್.ಡಿ.ಮಲ್ಲೇಶ್ ಸೇರಿದಂತೆ ಪ್ರಚಾರ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಬಿಜೆಪಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದರು. ತಳ ಸಮುದಾಯದ ನಾಯಕರನ್ನು ಬಿಜೆಪಿ ಸಹಿಸಿಕೊಳ್ಳುತ್ತಿಲ್ಲ. ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣ ಮಾಡಿರುವುದು ಖಂಡನೀಯ ಎಂದು ಹೇಳಿದರು.

ಈ ಘಟನೆಯನ್ನು ವಿರೋಧಿಸಿ ಮಾತನಾಡಿದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನ್ಯಾಯ ಕೇಳಲು ಮುಂದಾದವರಿಗೂ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕ್ರಮಗಳನ್ನು ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.

Author

ANU News

Follow Me
Other Articles
Previous

Bengaluru sewage management: Ramalinga Reddy orders joint inspections, faster STP upgrades

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ
    • Bengaluru sewage management: Ramalinga Reddy orders joint inspections, faster STP upgrades
    • ವ್ಯಾಪಾರ ಅಡೆತಡೆ ಕಡಿತ, ನವೋದ್ಯಮ ವಿಸ್ತರಣೆಗೆ ‘ಬ್ರಿಕ್ಸ್’ ಕ್ರಿಯಾ ಯೋಜನೆ ಅಗತ್ಯ: ಪ್ರಧಾನಿ ಮೋದಿ
    • ಜಲಮೂಲಗಳಿಗೆ ಕೊಳಚೆ ನೀರು ಸೇರುವುದಕ್ಕೆ ಕಡಿವಾಣ, STPಗಳ ಸಾಮರ್ಥ್ಯವರ್ಧನೆಗೆ ತ್ವರಿತ ಕ್ರಮ: ರಾಮಲಿಂಗಾ ರೆಡ್ಡಿ
    • Tunnel road won’t solve Bengaluru’s problems, says BJP MLC C.T. Ravi
    Copyright 2026 — ANU News. All rights reserved. Blogsy WordPress Theme