Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

By Anu News
May 28, 2026 1 Min Read
0

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿರುವ ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ನಾಗಶ್ರೀ ಮಾತೃ ವೃಂದ ತಂಡದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ತೆಂಕಬೆಳ್ಳೂರು ಧನುಪೂಜೆ ನಾಗಶ್ರೀ ವಿವೇಕ ಭವನದಲ್ಲಿ ನಡೆಯಿತು.

24 ವರ್ಷಗಳಿಂದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯ ಸಭೆಯಲ್ಲಿ ಮೊದಲಿಗೆ ಲೆಕ್ಕಪತ್ರ ಮಂಡನೆ ನಡೆಯಿತು. ಬಳಿಕ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್‌ನ ಗೌರವ ಮಾರ್ಗದರ್ಶಕರಾಗಿ ಪೊಳಲಿ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಗೌರವ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅನಂತ್ ರಾಮ್ ಹೆರಳ್ ಆಯ್ಕೆಯಾದರು.

ಅಧ್ಯಕ್ಷರಾಗಿ ಹರೀಶ್ ಮುಡೈಕೋಡಿ, ಉಪಾಧ್ಯಕ್ಷರಾಗಿ ತಿಮ್ಮಪ್ಪ ಕಮ್ಮಾಜೆ, ಪ್ರಧಾನ ಕಾರ್ಯದರ್ಶಿಯಾಗಿ ತಿರುಮಲೇಶ್ ಬೆಳ್ಳೂರು, ಜೊತೆ ಕಾರ್ಯದರ್ಶಿಯಾಗಿ ದುರ್ಗಾ ಪ್ರಸಾದ್ ಕಮ್ಮಾಜೆ, ಕೋಶಾಧಿಕಾರಿಯಾಗಿ ತಿರುಲೇಶ್ ಬೆಳ್ಳೂರು ಆಯ್ಕೆಯಾದರು.

ಇದೇ ವೇಳೆ ನಾಗಶ್ರೀ ಮಾತೃ ವೃಂದದ ಅಧ್ಯಕ್ಷರಾಗಿ ಸೌಮ್ಯ ಕಮ್ಮಾಜೆ, ಉಪಾಧ್ಯಕ್ಷರಾಗಿ ಲತಾ ಧನುಪೂಜೆ, ಪ್ರಧಾನ ಕಾರ್ಯದರ್ಶಿಯಾಗಿ ಶೋಭಿತಾ ಕಮ್ಮಾಜೆ, ಜೊತೆ ಕಾರ್ಯದರ್ಶಿಯಾಗಿ ಭವ್ಯ ಬೆಳ್ಳೂರು ಹಾಗೂ ಕೋಶಾಧಿಕಾರಿಯಾಗಿ ದಿವ್ಯ ಬೆಳ್ಳೂರು ಆಯ್ಕೆಯಾದರು.

Author

Anu News

Follow Me
Other Articles
Previous

ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

Next

ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ
    • Bengaluru gets its first ‘Circular Textile Lab’ to turn textile waste into useful products
    • ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ
    • Horror, humour and a mysterious bus: Shine Shetty’s ‘Shankarabharana’ teaser unveiled
    • ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್
    Copyright 2026 — ANU News. All rights reserved. Blogsy WordPress Theme