Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

By ANU News
August 4, 2026 1 Min Read
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ.

ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಉಡುಪಿ, ರಾಯಚೂರು, ಯಾದಗಿರಿ, ಗದಗ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ.

ಇನ್ನೊಂದೆಡೆ, ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಪ್ರಾತಿನಿಧ್ಯ ಪಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಈ ಜಿಲ್ಲೆಯಿಂದ ಆರು ಸಚಿವರು ಸ್ಥಾನ ಪಡೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯಿಂದ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ರಾಮನಗರ, ಬೆಳಗಾವಿ, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಗಳಿಂದ ತಲಾ ಇಬ್ಬರು ಸಚಿವರು ಸ್ಥಾನ ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಮೈಸೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೀದರ್, ಚಾಮರಾಜನಗರ ಹಾಗೂ ವಿಜಯಪುರ ಜಿಲ್ಲೆಗಳಿಗೆ ತಲಾ ಒಬ್ಬ ಸಚಿವರಿಗೆ ಅವಕಾಶ ದೊರೆತಿದೆ.

ಸಂಪುಟ ವಿಸ್ತರಣೆ ಬಳಿಕವೂ ಎಂಟು ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತವಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪ್ರಾದೇಶಿಕ ಸಮತೋಲನದ ಕುರಿತು ಪ್ರಶ್ನೆಗಳು ಕೇಳಿಬರುತ್ತಿವೆ.

Author

ANU News

Follow Me
Other Articles
Previous

Poll strategist-turned-politician Prashant Kishor enters Bihar Assembly with big Bankipura win

Next

‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
    • ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
    • Poll strategist-turned-politician Prashant Kishor enters Bihar Assembly with big Bankipura win
    • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್
    • Karnataka cabinet expansion triggers Congress revolt; MLAs face pressure to resign
    Copyright 2026 — ANU News. All rights reserved. Blogsy WordPress Theme