Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

By Anu News
August 20, 2026 1 Min Read
0

ಚಾಮರಾಜನಗರ: ಹನೂರು ವನ್ಯಜೀವಿ ವಲಯದಲ್ಲಿ ಮೂವರು ಶಂಕಿತ ಕಳ್ಳಬೇಟೆಗಾರರು ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ದುಷ್ಕರ್ಮಿಗಳ ಕೃತ್ಯಗಳು ಮುಂದುವರಿದಿವೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಲಾಗಿದ್ದು, ಬೇಟೆ ತಡೆ ಶಿಬಿರವನ್ನೂ ಸ್ಫೋಟಿಸಲಾಗಿದೆ.

ಆಗಸ್ಟ್ 15ರಂದು ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಘಟನೆಗೆ ಪ್ರತೀಕಾರವಾಗಿ ಈ ಕೃತ್ಯಗಳನ್ನು ಎಸಗಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಶಿಲುವೆಪುರ ಅರಣ್ಯ ವ್ಯಾಪ್ತಿಗೆ ನುಗ್ಗಿದ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿದ್ದು, ಸುಮಾರು 10 ಎಕರೆಗೂ ಹೆಚ್ಚು ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಜಾಗೇರಿ ಸಮೀಪದ ಕಳ್ಳಬೇಟೆ ತಡೆ ಶಿಬಿರವನ್ನೂ ಧ್ವಂಸಗೊಳಿಸಲಾಗಿದೆ.

ಇದಕ್ಕೂ ಮುನ್ನ ಕೊತ್ತನೂರು ವಲಯದ ಮಿಂಚಿನರೆಹಳ್ಳದಲ್ಲಿದ್ದ ಕಳ್ಳಬೇಟೆ ತಡೆ ಶಿಬಿರವನ್ನು ಡೈನಮೈಟ್ ಹಾಗೂ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಲಾಗಿತ್ತು. ಸ್ಫೋಟದ ತೀವ್ರತೆಗೆ ಶಿಬಿರದ ಗೋಡೆಗಳು ಹಾನಿಗೊಂಡಿದ್ದು, ಒಳಗಿದ್ದ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆಯಲ್ಲಿ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸರಣಿ ಕೃತ್ಯಗಳು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಆತಂಕ ಮೂಡಿಸಿವೆ.

ಎನ್‌ಕೌಂಟರ್ ಬಳಿಕ ಪ್ರತೀಕಾರದ ದಾಳಿ ನಡೆಯುತ್ತಿರುವ ಶಂಕೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

Author

Anu News

Follow Me
Other Articles
Previous

Delhi clears structures outside Pak High Commission in tit-for-tat move

Next

Poaching groups suspected behind forest fire, camp blast in Chamarajanagar

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Southern states’ political voice must be protected, says CM DK Shivakumar
    • ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ
    • 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
    • Sajjan Kumar, serving life term in 1984 anti-Sikh riots case, dies at 80
    • Poaching groups suspected behind forest fire, camp blast in Chamarajanagar
    Copyright 2026 — ANU News. All rights reserved. Blogsy WordPress Theme