Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

By ANU News
August 15, 2026 1 Min Read
0

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಪಾವತಿಗಾಗಿ ರಾಜ್ಯ ಸರ್ಕಾರ ₹170 ಕೋಟಿ ಬಿಡುಗಡೆ ಮಾಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಈ ಘೋಷಣೆ ಮಾಡಿದರು. ಸಭೆಯಲ್ಲಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಯಿತು.

2025ರಲ್ಲಿ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದ್ದು, ಒಟ್ಟು ₹1,271 ಕೋಟಿ ವೇತನ ಹಿಂಬಾಕಿ ಪಾವತಿಸಬೇಕಿತ್ತು. ಈ ಹಿಂದೆ ಸರ್ಕಾರ ₹450 ಕೋಟಿ ಬಿಡುಗಡೆ ಮಾಡಿತ್ತು. ಇದೀಗ ಬಾಕಿ ಉಳಿದಿದ್ದ ₹821 ಕೋಟಿಯಲ್ಲಿ ಮತ್ತೆ ₹170 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ ₹651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವುದಾಗಿ ಬೈರತಿ ಸುರೇಶ್ ಭರವಸೆ ನೀಡಿದರು.

ಇದೇ ವೇಳೆ ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಸಚಿವರು ತಿಳಿಸಿದರು. ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಈ ಆರೋಗ್ಯ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

Author

ANU News

Follow Me
Other Articles
Previous

C.P. Radhakrishnan’s two-day Tamil Nadu visit to include convocation, book launch

Next

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Food safety drive: Gujarat officials raid Surat, Deesa units, seize adulterated products
    • Mamata Banerjee aide Ashish Banerjee dies mysteriously; police probe suicide note
    • ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ
    • Shravana Mela special train derails near Silli-Bokaro section, services restored
    • ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು
    Copyright 2026 — ANU News. All rights reserved. Blogsy WordPress Theme