Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

By ANU News
August 14, 2026 1 Min Read
0

ಹನೂರು: ತಾಲ್ಲೂಕಿನಲ್ಲಿ ದಿನಾಂಕ 14.08.1992 ಮಿಣ್ಯ ದಾಳಿಯಲ್ಲಿ ವೀರಪ್ಪನ್ ನಿಂದ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಮಾಡಲಾಯಿತು.

ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ರಾಮಾಪರ ವೃತ್ತ ನಿರೀಕ್ಷಕರಾದ ಚಿಕ್ಕರಂಗ ಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಹುತಾತ್ಮ ಅಧಿಕಾರಿಗಳ ಸಂಬಂಧಿಕರು ಸ್ಮಾರಕ ಸ್ತಂಭಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಿ ಶ್ರದ್ದಾಂಜಲಿ ಅರ್ಪಿಸಿದರು.

ಈ ವೇಳೆ ವೃತ್ತ ನಿರೀಕ್ಷಕರಾದ ಚಿಕ್ಕರಂಗಶೆಟ್ಟಿ ಮಾತನಾಡಿ ಇತಿಹಾಸವನ್ನು ಮೆಲಕು ಹಾಕಿದರು. ಈ ದಿನ ಎಲ್ಲರಿಗೂ ನೋವುಂಟು ಮಾಡುವ ದಿನವಾಗಿದೆ. ವೀರಪ್ಪನ್ ಕಾರ್ಯಾಚರಣೆಯಲ್ಲಿ ಕಮಲ ನಾಯಕ್ ಎಂಬ ಗುಪ್ತ ಮಾಹಿತಿದಾರನ ಕುತಂತ್ರ ಮೋಸ ಮತ್ತು ನಂಬಿಕೆ ದ್ರೋಹದಿಂದ ಇಂತಹ ಯುವ ಪೊಲೀಸ್ ಪಡೆಗಳನ್ನು ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಯಿತು. ಪೊಲೀಸ್ ಮಾಹಿತಿದಾರನಂತೆ ಕೆಲಸ ಮಾಡುತ್ತಿದ್ದು, ಒಳಗೆ ವೀರಪ್ಪನ್ ಸಹಚರನಾಗಿರುವುದು ಪೊಲೀಸರಿಗೆ ತಿಳಿದಿರಲಿಲ್ಲ . ವೀರಪ್ಪನ್ ಒಳಸಂಚಿನಂತೆ ಕಮಲ ನಾಯಕ್ ಕೆಂಪು ಬಟ್ಟೆ ಧರಿಸಿ ಬಂದಿದ್ದರು. ಕಾರ್ಯಾಚರಣೆ ವೇಳೆ ಮಿಣ್ಯಂ ಅರಣ್ಯ ಪ್ರದೇಶದಲ್ಲಿ ಜೀಪ್ ಇಳಿದು ಓಡಿಬಿಟ್ಟ. ನಂತರ ವೀರಪ್ಪನ್ ಸಹಚರರು ಗುಂಡಿನ ದಾಳಿ ನಡೆಸಿದರು. ಕಮಲಾ ನಾಯಕ್ ಎಂಬ ಕುತಂತ್ರ ಬುದ್ಧಿಯಿಂದ ಎಸ್. ಟಿ. ಎಫ್.ಪೊಲೀಸ್ ವರಿಷ್ಠಾಧಿಕಾರಿ ಹರಿಕೃಷ್ಣ ಸೇರಿದಂತೆ ಶಕೀಲ್ ಅಹಮದ್, ಅಪ್ಪಚ್ಚು, ಸುಂದರ್, ಕಾಳಪ್ಪ, ಸೋಮಪ್ಪ ಬೆನಗೊಂಡ ಅಧಿಕಾರಿಗಳು, ಸಿಬ್ಬಂದಿಗಳು ಹುತಾತ್ಮರಾದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಹುತಾತ್ಮ ಪೊಲೀಸರಾದ ಕಾಳಪ್ಪರವರ ಕುಟುಂಬ ವರ್ಗದವರು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಮಂಜು, ರಾಮಕೃಷ್ಣ ಇನ್ನಿತರರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

Next

ಕಾಂಗ್ರೆಸ್‌ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಕಾಂಗ್ರೆಸ್‌ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ
    • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ
    • ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
    • Salim Ahmed Elected Karnataka Legislative Council Chairman
    • SC Stays Madras HC Order Scrapping TN Govt Jobs for Karur Stampede Victims’ Kin
    Copyright 2026 — ANU News. All rights reserved. Blogsy WordPress Theme