Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ

By ANU News
September 15, 2026 1 Min Read
0

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಆದರೆ, ಕೆಲವೆಡೆ ರೈತರು ನೀರು ತಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕೆ.ಆರ್. ಪೇಟೆ ಹಾಗೂ ಪಾಂಡವಪುರ ಭಾಗದ ರೈತರು ಸಹಕರಿಸಿ, ಮದ್ದೂರು ಮತ್ತು ಮಳವಳ್ಳಿ ಭಾಗದ ಕೆರೆಗಳು ತುಂಬಲು ಅವಕಾಶ ಮಾಡಿಕೊಡಬೇಕು ಎಂದು ಸಚಿವರು ಮನವಿ ಮಾಡಿದರು.

ನೀರು ಹರಿಸುವ ಕಾರ್ಯಕ್ಕೆ ಅಡ್ಡಿಪಡಿಸಿದರೆ ಅಗತ್ಯವಿದ್ದಲ್ಲಿ ಪೊಲೀಸ್ ಭದ್ರತೆ ಪಡೆದು ನೀರು ಹರಿಸಲಾಗುವುದು ಎಂದು ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ಕರ್ನಾಟಕದ ವಾಸ್ತವ ನೀರಿನ ಸ್ಥಿತಿಗತಿಗಳನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.

ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ ಎಂಬ ತಮ್ಮ ನಿಲುವನ್ನು ಪುನರುಚ್ಚರಿಸಿದ ಅವರು, ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮಗಳ ಕುರಿತು ಒತ್ತಿ ಹೇಳಿದರು.

Author

ANU News

Follow Me
Other Articles
Previous

Srirangapatna Dasara to be low-key this year amid drought

Next

Mekedatu project is only permanent solution to Cauvery dispute, says K’taka minister

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme