Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ

By ANU News
May 24, 2026 1 Min Read
0

ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for Promotion of Industry and Internal Trade) ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಈ ಯೋಜನೆಯಡಿ 2026-27ರಿಂದ 2031-32ರವರೆಗೆ ಸುಮಾರು ₹33,660 ಕೋಟಿ ವೆಚ್ಚದಲ್ಲಿ ದೇಶಾದ್ಯಂತ 100 ವಿಶ್ವದರ್ಜೆಯ ಕೈಗಾರಿಕಾ ಉದ್ಯಾನವನಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಮೂಲಕ 50 ಉದ್ಯಾನವನಗಳನ್ನು ಆಯ್ಕೆ ಮಾಡಲಾಗುತ್ತದೆ.

BHAVYA ಯೋಜನೆ Make in India ಹಾಗೂ PM Gati Shakti ಯೋಜನೆಗಳೊಂದಿಗೆ ಸಂಯೋಜಿತವಾಗಿದ್ದು, ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ.

ಮಾರ್ಗಸೂಚಿಗಳ ಪ್ರಕಾರ, ಉದ್ಯಾನವನಗಳಲ್ಲಿ ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಸಂಪರ್ಕ, ಡಿಜಿಟಲ್ ಆಡಳಿತ ವ್ಯವಸ್ಥೆ, ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳು ಹಾಗೂ ಸುಸ್ಥಿರ ಅಭಿವೃದ್ಧಿ ಘಟಕಗಳು ಇರಲಿವೆ.

ಗ್ರೀನ್‌ಫೀಲ್ಡ್ ಮತ್ತು ಬ್ರೌನ್‌ಫೀಲ್ಡ್ ಕೈಗಾರಿಕಾ ಉದ್ಯಾನಗಳು ಯೋಜನೆಯ ವ್ಯಾಪ್ತಿಗೆ ಬರಲಿವೆ. ಸಾಮಾನ್ಯ ರಾಜ್ಯಗಳಲ್ಲಿ ಕನಿಷ್ಠ 100 ಎಕರೆ ಮತ್ತು ಗುಡ್ಡಗಾಡು ಹಾಗೂ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 25 ಎಕರೆ ಭೂಮಿ ಅಗತ್ಯವಿದೆ ಎಂದು ಸೂಚಿಸಲಾಗಿದೆ.

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ನಿಗಮದ (National Industrial Corridor Development Corporation) ಯೋಜನೆಯ ಮೇಲ್ವಿಚಾರಣೆ ಮತ್ತು ಕಾರ್ಯಗತಗೊಳಿಸುವ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.

ಈ ಯೋಜನೆಯಿಂದ ಉತ್ಪಾದನಾ ಹೂಡಿಕೆ, ಉದ್ಯೋಗ ಸೃಷ್ಟಿ ಹಾಗೂ ಜಾಗತಿಕ ಮೌಲ್ಯ ಸರಪಳಿಗಳಲ್ಲಿ ಭಾರತದ ಸ್ಥಾನ ಮತ್ತಷ್ಟು ಬಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Author

ANU News

Follow Me
Other Articles
Previous

ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

Next

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme